Homeಮುಖಪುಟ2024ರಲ್ಲಿ ಭಾರತದ ಪೌರತ್ವ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ

2024ರಲ್ಲಿ ಭಾರತದ ಪೌರತ್ವ ತ್ಯಜಿಸಿದ 2 ಲಕ್ಷಕ್ಕೂ ಹೆಚ್ಚು ಮಂದಿ

- Advertisement -
- Advertisement -

2024ರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಭಾರತದ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ (ಆ.8) ಲೋಕಸಭೆಗೆ ತಿಳಿಸಿದೆ.

ಈ ಕುರಿತು ಕಾಂಗ್ರೆಸ್ ಸಂಸದ ಕೆ.ಸಿ ವೇಣುಗೋಪಾಲ್ ಅವರು ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಲಿಖಿತ ಉತ್ತರ ನೀಡಿದ್ದಾರೆ.

ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 2020ರಲ್ಲಿ 85,256, 2021ರಲ್ಲಿ 1,63,370, 2022ರಲ್ಲಿ 2,25,620, 2023ರಲ್ಲಿ 2,16,219 ಮತ್ತು 2024ರಲ್ಲಿ 2,06,378 ಜನರು ಭಾರತದ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಸಚಿವ ಸಿಂಗ್ ಹೇಳಿದ್ದಾರೆ.

ಮುಂದುವರಿದು, 2011ರಲ್ಲಿ 1,22,819, 2012ರಲ್ಲಿ 1,20,923, 2013ರಲ್ಲಿ 1,31,405 ಮತ್ತು 2014ರಲ್ಲಿ 1,29,328 ಜನರು ಪೌರತ್ವ ತ್ಯಜಿಸಿದ್ದರು ಎಂದು ತಿಳಿಸಿದ್ದಾರೆ.

ಭಾರತೀಯ ಪೌರತ್ವ ತ್ಯಜಿಸಲು ಅಥವಾ ವಿದೇಶಿ ಪೌರತ್ವ ಪಡೆಯಲು ಕಾರಣ ಏನು ಎಂಬುವುದು ವೈಯಕ್ತಿಕ. ಅದು ಆ ವ್ಯಕ್ತಿಗೆ ಮಾತ್ರ ಗೊತ್ತು ಎಂದು ಸಚಿವ ಸಿಂಗ್ ತನ್ನ ಉತ್ತರದಲ್ಲಿ ಹೇಳಿದ್ದಾರೆ.

ಮತ್ತೊಂದು ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, ಲಭ್ಯವಿರುವ ಮಾಹಿತಿಯ ಪ್ರಕಾರ ವಿದೇಶಿದಲ್ಲಿ ನೆಲೆಸಿರುವ ಭಾರತೀಯರ ಜನಸಂಖ್ಯೆ 3,43,56,193 ಇದೆ. ಇದರಲ್ಲಿ 1,71,81,071 ಜನರು ಭಾರತೀಯ ಮೂಲದವರಿದ್ದಾರೆ ಮತ್ತು 1,71,75,122 ಜನರು ಅನಿವಾಸಿ ಭಾರತೀಯರು ಎಂದು ತಿಳಿಸಿದೆ.

2020ರ ದೆಹಲಿ ಗಲಭೆ ಪ್ರಕರಣ: ಸಿಎಎ ವಿರೋಧಿ ಹೋರಾಟಗಾರ ಖಾಲಿದ್ ಸೈಫಿಗೆ 10 ದಿನಗಳ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...