Homeಮುಖಪುಟಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

ಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

- Advertisement -
- Advertisement -

ಅನಾವರಣಗೊಂಡ ಎರಡು ದಿನಗಳೊಳಗೆ ಕಾಂಗ್ರೆಸ್‌ನ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ ನಡೆದಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ವೆಬ್‌ಸೈಟ್‌ನಿಂದ ಮಾಹಿತಿ ಕದಿಯಲು ಮತ್ತು ಅದನ್ನು ನಿಧಾನಗೊಳಿಸಲು (ಸರ್ವರ್ ಡೌನ್‌) ಸೈಬರ್ ದಾಳಿಕೋರರು ವಿಫಲ ಯತ್ನ ಮಾಡಿದ್ದಾರೆ. ಈ ನಡುವೆಯೂ ವೆಬ್‌ಸೈಟ್‌ ಮೂಲಕ 1.13 ಲಕ್ಷ ಜನರಿಂದ ₹2.81 ಕೋಟಿ ದೇಣಿಗೆ ಸಂಗ್ರಹಿಸಲಾಗಿದೆ ಎಂದು ವರದಿ ಹೇಳಿದೆ.

ಬುಧವಾರ ಬೆಳಗ್ಗೆ 9 ಗಂಟೆಯವರೆಗೆ ಒಟ್ಟು 1,13,713 ದಾನಿಗಳು ದೇಣಿಗೆ ನೀಡಿದ್ದಾರೆ. ಈ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ, ಅಶೋಕ್ ಗೆಹ್ಲೋಟ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಸೇರಿದಂತೆ 32 ಜನರಿಂದ ₹1 ಲಕ್ಷಕ್ಕಿಂತ ಹೆಚ್ಚು ದೇಣಿಗೆ ಬಂದಿದೆ. 612 ಮಂದಿ ₹13,800 ರೂ.ಗಿಂತ ಹೆಚ್ಚು ದೇಣಿಗೆ ನೀಡಿದ್ದಾರೆ.

ಕಳೆದ ಸೋಮವಾರ ‘ದೇಶಕ್ಕಾಗಿ ದೇಣಿಗೆ’ ಅಭಿಯಾನದ ಅಂಗವಾಗಿ ಕಾಂಗ್ರೆಸ್ ತನ್ನ ವೆಬ್‌ಸೈಟ್‌ ಅನಾವರಣಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ₹1.38 ಲಕ್ಷ ದೇಣಿಗೆ ನೀಡಿದ್ದಾರೆ.

ಇದುವರೆಗೆ ಸಂಗ್ರಹವಾದ ಒಟ್ಟು ₹2.81 ಕೋಟಿಯಲ್ಲಿ ಮಹಾರಾಷ್ಟ್ರದಿಂದ ಗರಿಷ್ಟ ₹56 ಲಕ್ಷ ಸಂಗ್ರಹವಾಗಿದೆ. ನಂತರದ ಸ್ಥಾನದಲ್ಲಿ ರಾಜಸ್ಥಾನದಿಂದ ₹26 ಲಕ್ಷ, ದೆಹಲಿಯಿಂದ ₹20 ಲಕ್ಷ, ಉತ್ತರ ಪ್ರದೇಶದಿಂದ ₹19 ಲಕ್ಷ ಮತ್ತು ಕರ್ನಾಟಕದಿಂದ ₹18 ಲಕ್ಷ ಸಂಗ್ರಹವಾಗಿದೆ.

ದೇಣಿಗೆ ಸಂಗ್ರಹದ ಕುರಿತು ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ದೇಣಿಗೆಯ ಪ್ರಮಾಣದಲ್ಲಿ ಮಹಾರಾಷ್ಟ್ರವು ಅಗ್ರಸ್ಥಾನದಲ್ಲಿದ್ದರೂ, ಬಿಹಾರದಿಂದ ಹೆಚ್ಚಿನ ಸಂಖ್ಯೆಯ ದಾನಿಗಳು ದೇಣಿಗೆ ನೀಡಿದ್ದಾರೆ. ಇದು ಹೆಚ್ಚಿನ ಸಂಖ್ಯೆಯ ಜನರು ನಮ್ಮೊಂದಿಗೆ ಬೆರೆಯಲು ಸಿದ್ಧರಿದ್ದಾರೆಂದು ತೋರಿಸುತ್ತದೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

ದೇಣಿಗೆ ಸಂಗ್ರಹ ವೆಬ್‌ಸೈಟ್‌ www.donateinc.inಗೆ ಕಳೆದ 48 ಗಂಟೆಗಳಲ್ಲಿ ₹1.2 ಕೋಟಿ ಜನರು ಭೇಟಿ ನೀಡಿದ್ದಾರೆ. ಈ ನಡುವೆ 20,400 ಸೈಬರ್ ದಾಳಿಗಳು ನಡೆದಿವೆ. ಇದರಲ್ಲಿ 1,340 ಜನರು ಸೈಟ್‌ನಿಂದ ಮಾಹಿತಿ ಕದಿಯಲು ಪ್ರಯತ್ನಿಸಿದ್ದಾರೆ. ಉಳಿದವರು ವೆಬ್‌ಸೈಟ್‌ ನಿಧಾನಗೊಳಿಸಲು ವಿಫಲ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ದೇಣಿಗೆ ಪಾವತಿ ವಿಧಾನದ ವಿಶ್ಲೇಷಣೆ ನೋಡುವುದಾದರೆ, ಶೇ.81ರಷ್ಟು ದಾನಿಗಳು ಪಾವತಿ ಮಾಡಲು ಯುಪಿಐ ಬಳಸಿದ್ದಾರೆ. ಶೇ.7.95 ರಷ್ಟು ಜನರು ಕ್ರೆಡಿಟ್ ಕಾರ್ಡ್‌, ಶೇ.6.34ರಷ್ಟು ಜನರು ಡೆಬಿಟ್ ಕಾರ್ಡ್‌, ಶೇ.4.78ರಷ್ಟು ಜನರು ನೆಟ್ ಬ್ಯಾಂಕಿಂಗ್ ಮತ್ತು ಶೇ.0.02 ಜನರು RTGS-NEFT ಬಳಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...