Homeಮುಖಪುಟಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

ಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

- Advertisement -
- Advertisement -

ಅನಾವರಣಗೊಂಡ ಎರಡು ದಿನಗಳೊಳಗೆ ಕಾಂಗ್ರೆಸ್‌ನ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ ನಡೆದಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ವೆಬ್‌ಸೈಟ್‌ನಿಂದ ಮಾಹಿತಿ ಕದಿಯಲು ಮತ್ತು ಅದನ್ನು ನಿಧಾನಗೊಳಿಸಲು (ಸರ್ವರ್ ಡೌನ್‌) ಸೈಬರ್ ದಾಳಿಕೋರರು ವಿಫಲ ಯತ್ನ ಮಾಡಿದ್ದಾರೆ. ಈ ನಡುವೆಯೂ ವೆಬ್‌ಸೈಟ್‌ ಮೂಲಕ 1.13 ಲಕ್ಷ ಜನರಿಂದ ₹2.81 ಕೋಟಿ ದೇಣಿಗೆ ಸಂಗ್ರಹಿಸಲಾಗಿದೆ ಎಂದು ವರದಿ ಹೇಳಿದೆ.

ಬುಧವಾರ ಬೆಳಗ್ಗೆ 9 ಗಂಟೆಯವರೆಗೆ ಒಟ್ಟು 1,13,713 ದಾನಿಗಳು ದೇಣಿಗೆ ನೀಡಿದ್ದಾರೆ. ಈ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ, ಅಶೋಕ್ ಗೆಹ್ಲೋಟ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಸೇರಿದಂತೆ 32 ಜನರಿಂದ ₹1 ಲಕ್ಷಕ್ಕಿಂತ ಹೆಚ್ಚು ದೇಣಿಗೆ ಬಂದಿದೆ. 612 ಮಂದಿ ₹13,800 ರೂ.ಗಿಂತ ಹೆಚ್ಚು ದೇಣಿಗೆ ನೀಡಿದ್ದಾರೆ.

ಕಳೆದ ಸೋಮವಾರ ‘ದೇಶಕ್ಕಾಗಿ ದೇಣಿಗೆ’ ಅಭಿಯಾನದ ಅಂಗವಾಗಿ ಕಾಂಗ್ರೆಸ್ ತನ್ನ ವೆಬ್‌ಸೈಟ್‌ ಅನಾವರಣಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ₹1.38 ಲಕ್ಷ ದೇಣಿಗೆ ನೀಡಿದ್ದಾರೆ.

ಇದುವರೆಗೆ ಸಂಗ್ರಹವಾದ ಒಟ್ಟು ₹2.81 ಕೋಟಿಯಲ್ಲಿ ಮಹಾರಾಷ್ಟ್ರದಿಂದ ಗರಿಷ್ಟ ₹56 ಲಕ್ಷ ಸಂಗ್ರಹವಾಗಿದೆ. ನಂತರದ ಸ್ಥಾನದಲ್ಲಿ ರಾಜಸ್ಥಾನದಿಂದ ₹26 ಲಕ್ಷ, ದೆಹಲಿಯಿಂದ ₹20 ಲಕ್ಷ, ಉತ್ತರ ಪ್ರದೇಶದಿಂದ ₹19 ಲಕ್ಷ ಮತ್ತು ಕರ್ನಾಟಕದಿಂದ ₹18 ಲಕ್ಷ ಸಂಗ್ರಹವಾಗಿದೆ.

ದೇಣಿಗೆ ಸಂಗ್ರಹದ ಕುರಿತು ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ದೇಣಿಗೆಯ ಪ್ರಮಾಣದಲ್ಲಿ ಮಹಾರಾಷ್ಟ್ರವು ಅಗ್ರಸ್ಥಾನದಲ್ಲಿದ್ದರೂ, ಬಿಹಾರದಿಂದ ಹೆಚ್ಚಿನ ಸಂಖ್ಯೆಯ ದಾನಿಗಳು ದೇಣಿಗೆ ನೀಡಿದ್ದಾರೆ. ಇದು ಹೆಚ್ಚಿನ ಸಂಖ್ಯೆಯ ಜನರು ನಮ್ಮೊಂದಿಗೆ ಬೆರೆಯಲು ಸಿದ್ಧರಿದ್ದಾರೆಂದು ತೋರಿಸುತ್ತದೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

ದೇಣಿಗೆ ಸಂಗ್ರಹ ವೆಬ್‌ಸೈಟ್‌ www.donateinc.inಗೆ ಕಳೆದ 48 ಗಂಟೆಗಳಲ್ಲಿ ₹1.2 ಕೋಟಿ ಜನರು ಭೇಟಿ ನೀಡಿದ್ದಾರೆ. ಈ ನಡುವೆ 20,400 ಸೈಬರ್ ದಾಳಿಗಳು ನಡೆದಿವೆ. ಇದರಲ್ಲಿ 1,340 ಜನರು ಸೈಟ್‌ನಿಂದ ಮಾಹಿತಿ ಕದಿಯಲು ಪ್ರಯತ್ನಿಸಿದ್ದಾರೆ. ಉಳಿದವರು ವೆಬ್‌ಸೈಟ್‌ ನಿಧಾನಗೊಳಿಸಲು ವಿಫಲ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ದೇಣಿಗೆ ಪಾವತಿ ವಿಧಾನದ ವಿಶ್ಲೇಷಣೆ ನೋಡುವುದಾದರೆ, ಶೇ.81ರಷ್ಟು ದಾನಿಗಳು ಪಾವತಿ ಮಾಡಲು ಯುಪಿಐ ಬಳಸಿದ್ದಾರೆ. ಶೇ.7.95 ರಷ್ಟು ಜನರು ಕ್ರೆಡಿಟ್ ಕಾರ್ಡ್‌, ಶೇ.6.34ರಷ್ಟು ಜನರು ಡೆಬಿಟ್ ಕಾರ್ಡ್‌, ಶೇ.4.78ರಷ್ಟು ಜನರು ನೆಟ್ ಬ್ಯಾಂಕಿಂಗ್ ಮತ್ತು ಶೇ.0.02 ಜನರು RTGS-NEFT ಬಳಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...