Homeಮುಖಪುಟಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

- Advertisement -
- Advertisement -

ಇಸ್ರೇಲ್‌ ಮಿಲಿಟರಿ ದಾಳಿಯಿಂದ ಇದುವರೆಗೆ 20,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಿಯಂತ್ರಿತ ಎನ್‌ಕ್ಲೇವ್‌ ಪ್ರದೇಶದ ಆರೋಗ್ಯಾಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಮೃತರ ಸಂಖ್ಯೆ ಗಾಝಾದ ಯುದ್ಧ ಪೂರ್ವ ಜನಸಂಖ್ಯೆಯ ಸುಮಾರು 1% ರಷ್ಟಿದೆ. ಯುದ್ದದ ಪರಿಣಾಮ ಗಾಝಾದ ಶೇ. 85ರಷ್ಟು ಜನರನ್ನು ಸ್ಥಳಾಂತರಿಸಲಾಗಿದೆ. ಇಸ್ರೇಲ್ ದಾಳಿಯಲ್ಲಿ ಗಾಝಾ ನಿಯಂತ್ರಿತ ಸಣ್ಣ ಕರಾವಳಿ ಎನ್‌ಕ್ಲೇವ್‌ನ ವಿಶಾಲ ಪ್ರದೇಶಗಳು ಯುದ್ಧ ಭೂಮಿಯಾಗಿ ಮಾರ್ಪಟ್ಟಿವೆ.

ಇಸ್ರೇಲ್‌ ದಾಳಿಯಿಂದ ಇದುವರೆಗೆ 20,057 ಗಾಝಾ ನಾಗರಿಕರು ಮೃತಪಟ್ಟಿದ್ದಾರೆ. ಸುಮಾರು 53,320 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಸರಿಸುಮಾರು ಮೂರನೇ ಎರಡರಷ್ಟು ಮಂದಿ ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ಹಮಾಸ್ ಗುಂಪಿನವರು ಮತ್ತು ನಾಗರಿಕರು ಎಂಬ ವ್ಯತ್ಯಾಸವಿಲ್ಲದೆ ಸಾವಿರಾರು ಜನರನ್ನು ಇಸ್ರೇಲ್ ನಿರ್ಧಯವಾಗಿ ಹತ್ಯೆ ಮಾಡಿದೆ. ಹಮಾಸ್ ನಮ್ಮ ಗುರಿ ಎಂದು ಇಸ್ರೇಲ್ ಹೇಳುತ್ತಿದ್ದು, ಅಮಾಯಕ ನಾಗರಿಕರ ಮಾರಣ ಹೋಮ ನಡೆಸುತ್ತಿದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇದುವರೆಗೆ ಸುಮಾರು 7 ಸಾವಿರ ಹಮಾಸ್ ಸದಸ್ಯರನ್ನು ಕೊಂದಿದ್ದೇವೆ ಎಂದು ಇಸ್ರೇಲ್ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ಆದರೆ, ಇದನ್ನು ಖಚಿತಡಿಸುವ ಯಾವುದೇ ಪುರಾವೆಗಳು ದೊರೆತಿಲ್ಲ.

ಕದನ ವಿರಾಮದ ಕರೆಗಳ ಹೊರತಾಗಿಯೂ, 16 ವರ್ಷಗಳಿಂದ ಗಾಝಾವನ್ನು ಆಳುತ್ತಿರುವ ಹಮಾಸ್ ಅನ್ನು ಸಂಪೂರ್ಣ ನಾಶಪಡಿಸುವವರೆಗೂ ತಾನು ಸುಮ್ಮನಿರುವುದಿಲ್ಲ ಎಂದು ಇಸ್ರೇಲ್ ಹೇಳಿದೆ.

“ಹಮಾಸ್‌ನ ನಿರ್ಮೂಲನೆ, ನಮ್ಮ ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಝಾದಿಂದ ಬೆದರಿಕೆಯನ್ನು ಕೊನೆಗೊಳಿಸುವುದು ಈ ಎಲ್ಲಾ ಉದ್ದೇಶಗಳನ್ನು ಸಾಧಿಸುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ” ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಬೆಂಬಲದೊಂದಿಗೆ ಅಥವಾ ಇಲ್ಲದೆ ಇಸ್ರೇಲ್ ಯುದ್ಧ ಮುಂದುವರೆಸಲಿದೆ ಎಂದು ಇಸ್ರೇಲ್‌ನ ವಿದೇಶಾಂಗ ಸಚಿವ ಎಲಿ ಕೊಹೆನ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: 87 ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...