Homeಅಂತರಾಷ್ಟ್ರೀಯಅಮೇರಿಕಾ: ಜೂನ್ ವೇಳೆಗೆ 2 ಲಕ್ಷ ಎಚ್ -1ಬಿ ವೀಸಾ ಉದ್ಯೋಗಿಗಳಿಗೆ ಅಪಾಯ

ಅಮೇರಿಕಾ: ಜೂನ್ ವೇಳೆಗೆ 2 ಲಕ್ಷ ಎಚ್ -1ಬಿ ವೀಸಾ ಉದ್ಯೋಗಿಗಳಿಗೆ ಅಪಾಯ

- Advertisement -
- Advertisement -

ಮಾನಸಿ ವಸವಡ ಅವರಿಗೆ ಅಮೇರಿಕಾದಲ್ಲಿ ಕಾನೂನುಬದ್ಧವಾಗಿ ಇರಲು ಇನ್ನು ಕೇವಲ ಮೂರು ವಾರಗಳಿಗಳಷ್ಟೇ ಇದೆ. 31 ವರ್ಷದ ಇವರು ನ್ಯೂಜೆರ್ಸಿಯ ಪ್ಯಾಸಾಯಿಕ್ ಕೌಂಟಿಯಲ್ಲಿ ಕಳೆದ ಎರಡು ವರ್ಷದಿಂದ ದಂತ ವೈದ್ಯರಾಗಿದ್ದಾರೆ. ಮಾರ್ಚ್ ತಿಂಗಳ ಮಧ್ಯದಿಂದ ಕೊರೊನಾ ಕಾರಣವಾಗಿ ಇವರ ದಂತಾಲಯ ಬಾಗಿಲು ಮುಚ್ಚಿದೆ. ಅಂದಿನಿಂದ ಅವರು ಯಾವುದೆ ಕೆಲಸ ಮಾಡದೇ ಪಾವತಿಯಿಲ್ಲದೇ ರಜೆಯಲ್ಲಿದ್ದಾರೆ.

ವಿಶೇಷ ಕೌಶಲ್ಯ ಹೊಂದಿರುವವರಿಗೆ ಅಮೇರಿಕ ನೀಡುವ ತಾತ್ಕಾಲಿಕ ವೀಸಾವಾದ ಎಚ್ -1ಬಿ ವೀಸಾದಲ್ಲಿ ಮಾನಸಿ ಅಮೇರಿಕಾದಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿಯ ಕಾನೂನಿನಂತೆ ಎಚ್ -1ಬಿ ವೀಸಾದಲ್ಲಿ ಇರುವವರು ಪಾವತಿಯಲ್ಲದೆ 60 ದಿನಗಳವರೆಗೆ ಮಾತ್ರ ದೇಶದಲ್ಲಿ ಉಳಿಯಬಹುದಾಗಿದೆ. ಮಾನಸಿ ಅವರ ಪತಿ ನಂದನ್ ಬುಚ್ ಕೂಡಾ ದಂತವೈದ್ಯರಾಗಿದ್ದು ಅವರು ಸಹ ಎಚ್ -1ಬಿ ವೀಸಾದಲ್ಲಿದ್ದಾರೆ. ಅವರ ವೀಸಾ ಜೂನ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಹೆಚ್ಚುತ್ತಿರುವ ಆತಂಕಗಳ ನಡುವೆ ಈಗ ಇವರಿಬ್ಬರೂ ದಿನಕಳೆಯುತ್ತಿದ್ದಾರೆ.

ಭಾರತ ಈಗಾಗಲೇ ತನ್ನ ಗಡಿಗಳನ್ನು ಅನಿರ್ದಿಷ್ಟವಾಗಿ ಮುಚ್ಚಿರುವುದರಿಂದ, ದಂಪತಿಗಳು ಅಮೆರಿಕಾದಲ್ಲಿ ಉಳಿಯಲು ಸಾಧ್ಯವಿಲ್ಲದೆ ಹಾಗೂ ಭಾರತಕ್ಕೆ ಬರಲು ಸಾಧ್ಯವಾಗದ ಪರಿಸ್ಥತಿ ಶೀಘ್ರದಲ್ಲೇ ಬರಬಹುದು. ಅವರು ಯು.ಎಸ್. ವಿಶ್ವವಿದ್ಯಾಲಯದಲ್ಲಿ ದಂತ ಪದವಿ ಪಡೆಯುವುದಕ್ಕಾಗಿ 5,20,000 ಡಾಲರ್‌ ವಿದ್ಯಾರ್ಥಿ ಸಾಲವನ್ನು ಪಡೆದಿದ್ದಾರೆ. ಈ ಸಾಲವನ್ನು ಮರುಪಾವತಿ ಮಾಡಲು ಭಾರತದಲ್ಲಿ ಗಳಿಸುವ ಸಂಬಳದಿಂದ ಅಸಾಧ್ಯವಾಗಿದೆ. ಇದೆ ಒತ್ತಡದಿಂದ 31 ವರ್ಷದ ಬುಚ್ ತನ್ನ ತಲೆ ಕೂದಲನ್ನು ಕಳೆದುಕೊಳ್ಳಲು ಪ್ರಾರಂಭಿಸಿದ್ದಾರೆ. ಇಬ್ಬರೂ ಸರಿಯಾಗಿ ನಿದ್ದೆ ಮಾಡುತ್ತಿಲ್ಲ. ಮಾನಸಿ ಹೇಳುವಂತೆ “ಇದೀಗ ಎಲ್ಲವೂ ನಿಜವಾಗಿಯೂ ಗೊಂದಲಮಯವಾಗಿದೆ ಮತ್ತು ಕತ್ತಲೆಯಾಗಿದೆ, ನಾವು ಎಲ್ಲಿಗೆ ಹೋಗುತ್ತೇವೆ ಎಂದು ನಮಗೆ ತಿಳಿದಿಲ್ಲ.” ಎಂದು ಹೇಳುತ್ತಾರೆ.

ವಾಷಿಂಗ್ಟನ್ ಡಿ.ಸಿ. ಮೂಲದ ವಲಸೆ ನೀತಿ ವಿಶ್ಲೇಷಕ ಜೆರೆಮಿ ನ್ಯೂಫೆಲ್ಡ್ ಅವರ ಪ್ರಕಾರ, ಯು.ಎಸ್.ನಲ್ಲಿ ಗ್ರೀನ್ ಕಾರ್ಡ್ ಬಯಸುವ ಎರಡುವರೆ ಲಕ್ಷ ಅತಿಥಿ ಕಾರ್ಮಿಕರು ಜೂನ್ ಅಂತ್ಯದ ವೇಳೆಗೆ ತಮ್ಮ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಬಹುದು. ಇವರಲ್ಲಿ ಎರಡು ಲಕ್ಷ ಜನರು ಎಚ್-1ಬಿ ವೀಸಾದಲ್ಲಿರುವವರಾಗಿದ್ದಾರೆ. ನಿವಾಸಿಗಳಾಗದ ಇನ್ನೂ ಸಾವಿರಾರು ಜನರರನ್ನು ಅವರ ಮನೆಗೆ ಮರಳಲು ಒತ್ತಾಯಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ. ತಂತ್ರಜ್ಞಾನದ ಉದ್ಯಮದಲ್ಲಿ ಕೆಲಸ ಮಾಡುವ ಮುಕ್ಕಾಲು ಭಾಗದಷ್ಟು ಜನರು ಎಚ್-1ಬಿ ವೀಸಾವನ್ನು ಹೊಂದಿದ್ದಾರೆ. ಆದರೆ ಇದದ ನಿಖರವಾದ ಹಂತಗಳು ವರ್ಷದಿಂದ ವರ್ಷಕ್ಕೆ ಬದಲಾಗುತ್ತಾ ಇರುತ್ತವೆ.

ಕಳೆದ ಎರಡು ತಿಂಗಳಲ್ಲಿ ಒಂದು ಕೋಟಿ ಅಮೆರಿಕನ್ನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಎಚ್-1ಬಿ ವೀಸಾಗಳನ್ನು ನಿರ್ದಿಷ್ಟ ಸ್ಥಳಕ್ಕೆ ಮತ್ತು ಉದ್ಯೋಗದಾತರಿಗೆ ಸ್ವೀಕರಿಸಲಾಗುತ್ತದೆ, ಅವರು ಸ್ವೀಕರಿಸುವವರು ಕನಿಷ್ಠ ವೇತನವನ್ನು ಪಾವತಿಸಲು ಬದ್ಧರಾಗಿರುತ್ತಾರೆ. ಈ ವೀಸಾ ಸ್ವೀಕರಿಸುವವರನ್ನು ಅನುಪಸ್ಥಿತಿಯ ರಜೆ ನೀಡುವುದು, ಅವರ ವೇತನವನ್ನು ಕಡಿಮೆ ಮಾಡುವುದು ಹಾಗೂ ಕೆಲವು ಸಂದರ್ಭಗಳಲ್ಲಿ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದು ವೀಸಾ ನಿಯಮಗಳನ್ನು ಉಲ್ಲಂಘಿಸುತ್ತದೆ.

ಕೆಲಸದಿಂದ ವಜಾಗೊಂಡ ಎಚ್-1ಬಿ ಕಾರ್ಮಿಕರಿಗೆ ಮತ್ತೊಂದು ಉದ್ಯೋಗ ಹುಡುಕಲು, ಬೇರೆ ವೀಸಾಕ್ಕೆ ವರ್ಗಾಯಿಸಲು ಅಥವಾ ದೇಶವನ್ನು ತೊರೆಯಲು 60 ದಿನಗಳ ಕಾಲಾ ಅವಕಾಶವಿದೆ. ಅವರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳದಿದ್ದರೂ ಸಹ, ಈ ಅವಧಿಯಲ್ಲಿ ತಮ್ಮ ವೀಸಾಗಳನ್ನು ನವೀಕರಿಸಲು ಸಾಧ್ಯವಾಗದಿದ್ದರೆ ಕಾರ್ಮಿಕರು ಸಂದಿಗ್ಧತೆಗೆ ಸಿಲುಕುತ್ತಾರೆ.

ವೀಸಾ ಬಿಕ್ಕಟ್ಟು “ಮಾನವ ಮಟ್ಟದಲ್ಲಿ ಮತ್ತು ಆರ್ಥಿಕ ಮಟ್ಟದಲ್ಲಿ ದುರಂತವನ್ನು ಉಂಟುಮಾಡುತ್ತಿದೆ” ಎಂದು ಒಬಾಮಾ ಆಡಳಿತದಲ್ಲಿ ತಂತ್ರಜ್ಞಾನ ಮತ್ತು ವಲಸೆ ನೀತಿಯಲ್ಲಿ ಕೆಲಸ ಮಾಡಿದ ಡೌಗ್ ರಾಂಡ್ ಹೇಳುತ್ತಾರೆ. ಇವರು ಬೌಂಡ್ಲೆಸ್ ಇಮಿಗ್ರೇಷನ್ ಇಂಕ್ ಎಂಬ ಕಂಪನಿಯ ಸಹ-ಸಂಸ್ಥಾಪಕರಾಗಿದ್ದಾರೆ. ಈ ಕಂಪೆನಿ ಜನರಿಗೆ ವಲಸೆ ಹೋಗಲು ಸಹಾಯ ಮಾಡುತ್ತದೆ. ಎಚ್-1ಬಿ ಕಾರ್ಮಿಕರು ಸಾಮಾನ್ಯವಾಗಿ ಕುಟುಂಬಗಳನ್ನು ಹೊಂದಿ, ತಮ್ಮ ಇಡೀ ಜೀವನವನ್ನು ಮಕ್ಕಳೊಂದಿಗೆ ಅಮೆರಿಕಾದಲ್ಲಿ ಕಳೆದಿರಬಹುದು ಆದರೆ ಅಮೇರಿಕಾದಲ್ಲಿ ಉಳಿಯುವಂತೆ ತಮ್ಮ ಉದ್ಯೋಗಗಳನ್ನಷ್ಟೇ ಅವಲಂಬಿಸಿರುತ್ತಾರೆ. ಇದನ್ನು ರಾಂಡ್ “ಕೇವಲ ಅವ್ಯವಸ್ಥೆ” ಎಂದು ಹೇಳುತ್ತಾರೆ.

ಆಪಲ್, ಅಮೆಜಾನ್, ಫೇಸ್ಬುಕ್, ಗೂಗಲ್ ಮತ್ತು ಮೈಕ್ರೋಸಾಫ್ಟ್ ಅನ್ನು ಒಳಗೊಂಡ ಟೆಕ್‌ನೆಟ್‌ ಒಕ್ಕೂಟ ವಿದೇಶಿ ಮೂಲದ ಕಾರ್ಮಿಕರಿಗೆ ಪರಿಹಾರ ಕೋರಿ ಏಪ್ರಿಲ್ 17 ರಂದು ರಾಜ್ಯ ಮತ್ತು ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಗಳಿಗೆ ಪತ್ರ ಕಳುಹಿಸಿ, ಕನಿಷ್ಠ ಸೆಪ್ಟೆಂಬರ್ 10 ರವರೆಗೆ ಕೆಲಸದ ಮುಕ್ತಾಯ ದಿನಾಂಕಗಳನ್ನು ವಿಳಂಬಗೊಳಿಸುವಂತೆ ಕೋರಿದೆ. “ಈ ಸಮಸ್ಯೆಗಳು ಲಕ್ಷಾಂತರ ಅಪೂರ್ಣ ಉದ್ಯೋಗಗಳಿಗೆ ಕಾರಣವಾಗುತ್ತವೆ ಮತ್ತು ಭಾರೀ ಋಣಾತ್ಮಕ ಆರ್ಥಿಕ ಪರಿಣಾಮಗಳನ್ನು ಬೀರುತ್ತವೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ದೂರದಿಂದ ಕೆಲಸ ಮಾಡುವ ಕಚೇರಿಗಳನ್ನು ಬೆಂಬಲಿಸಲು, ಟೆಲಿಹೆಲ್ತ್ ಸೇವೆಗಳನ್ನು ಒದಗಿಸಿ ವೈದ್ಯರಿಗೆ ಸಹಾಯ ಮಾಡಲು ಮತ್ತು ವಿದ್ಯಾರ್ಥಿಗಳು ಮನೆಯಲ್ಲಿಯೇ ಕಲಿಯಲು ಟೆಕ್ ಉದ್ಯಮವು ನಿರ್ಣಾಯಕವಾಗಿದೆ ಎಂದು ಟೆಕ್‌ನೆಟ್‌ ಫೆಡರಲ್ ನೀತಿ ಮತ್ತು ಸರ್ಕಾರಿ ಸಂಬಂಧಗಳ ಹಿರಿಯ ಉಪಾಧ್ಯಕ್ಷ ಅಲೆಕ್ಸ್ ಬರ್ಗೋಸ್ ಹೇಳಿದ್ದಾರೆ. “ಆಡಳಿತವು ತೆರಿಗೆ ಸಲ್ಲಿಸುವ ಗಡುವನ್ನು ವಿಸ್ತರಿಸುವುದಕ್ಕಾಗಿ ನಾವು ಕಾಯುತ್ತಿದ್ದೇವೆ, ಹಾಗೆಯೆ ವೀಸಾ ಕಾರ್ಯಕ್ರಮಗಳಲ್ಲಿ ಕೂಡಾ ಇದೇ ರೀತಿಯ ವಿಸ್ತರೆಣೆ ಅರ್ಥಪೂರ್ಣವಾಗಿದೆ, ಯಾಕೆಂದರೆ ಇಲ್ಲಿ ಯಾರದ್ದೂ ಯಾವುದೇ ರೀತಿಯಲ್ಲಿ ತಪ್ಪಿಲ್ಲ” ಎಂದು ಅಲೆಕ್ಸ್ ಹೇಳಿದ್ದಾರೆ.

ಟೆಕ್‌ನೆಟ್‌ ಪತ್ರಕ್ಕೆ ಟ್ರಂಪ್ ಆಡಳಿತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕಾದ ಪೌರತ್ವ ಹಾಗೂ ವಲಸೆ ಸೇವೆಗಳ ವಕ್ತಾರರು, ಏಜೆನ್ಸಿ ವೀಸಾ ಗಡುವನ್ನು ವಿಸ್ತರಿಸುತ್ತಾರೆಯೇ ಎಂಬ ಬಗ್ಗೆ ಹೇಳಲು ನಿರಾಕರಿಸಿದರಾದರೂ, ಈ ಸಂದರ್ಭಗಳಲ್ಲಿ ಸಮಸ್ಯೆಯಾಗಿರುವ ಜನರಿಗೆ ವಿಶೇಷ ಬೆಂಬಲವನ್ನು ನೀಡಬಹುದು ಎಂದು ಹೇಳಿದರು.

ಅಮರಿಕಾ ಆಡಳಿತವು ವಲಸೆ ಹಾಗೂ ವಿದೇಶಿ ಮೂಲದ ಕಾರ್ಮಿಕರ ಬಗ್ಗೆ ಸತತ ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿವೆ. 2019 ರಲ್ಲಿ ವಲಸೆ ರಹಿತ ವೀಸಾಗಳ ಸಂಖ್ಯೆ ಸತತ ನಾಲ್ಕನೇ ವರ್ಷಕ್ಕೆ ಇಳಿದಿದ್ದು, 2015 ರಲ್ಲಿ ಒಂದು ಕೋಟಿ ಒಂಬತ್ತು ಲಕ್ಷದಿಂದ 87 ಲಕ್ಷಕ್ಕೆ ಇಳಿದಿದೆ ಎಂದು ರಾಜ್ಯ ಇಲಾಖೆ ತಿಳಿಸಿದೆ. ಅಕ್ರಮ ಸ್ಥಿತಿಗೆ ಸಿಲುಕುವವರಿಗೆ ಮಾರ್ಗದರ್ಶನ ನೀಡುವ ರಾಯಭಾರ ಕಚೇರಿ ಹಾಗೂ ಕಾನ್ಸುಲೇಟ್ ಕಾರ್ಯಾಚರಣೆಗಳನ್ನು ಇಲಾಖೆಯು ಕಳೆದ ತಿಂಗಳು ಮುಚ್ಚಿತು. ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ಘಟಕವಾದ ಅಮೇರಿಕಾದ ಪೌರತ್ವ ಮತ್ತು ವಲಸೆ ಸೇವೆಗಳಲ್ಲಿನ ವೈಯಕ್ತಿಕ ಸೇವೆಗಳನ್ನು ಮಾರ್ಚ್ 18 ರಿಂದ ಅಮಾನತುಗೊಳಿಸಲಾಗಿದೆ ಹಾಗೂ ಇದು ಜೂನ್ 4 ರವರೆಗೆ ಪ್ರಾರಂಭವಾಗುವುದಿಲ್ಲ.

ಏಪ್ರಿಲ್ 20 ರಂದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಉದ್ಯೋಗಗಳನ್ನು ರಕ್ಷಿಸಲು ಎಲ್ಲಾ ವಲಸೆಗಳ ಮೇಲೆ ತಾತ್ಕಾಲಿಕ ನಿಷೇಧವನ್ನು ಯೋಜಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ; ಮರುದಿನ ಅಮೇರಿಕಾದ ಹೊರಗಿನಿಂದ ಜನರಿಗೆ 60 ದಿನಗಳವರೆಗೆ ಹಸಿರು ಕಾರ್ಡ್‌ಗಳನ್ನು ಪಡೆಯದಂತೆ ತಡೆಯುವ ಕಾರ್ಯನಿರ್ವಾಹಕ ಆದೇಶವನ್ನು ಘೋಷಿಸಿದರು. ಇದು ವಿದೇಶಿ ಮೂಲದ ಕಾರ್ಮಿಕರನ್ನು ನೇಮಿಸಿಕೊಳ್ಳುವ ಕಂಪನಿಗಳಿಗೆ ಮತ್ತಷ್ಟು ಅಡ್ಡಿಯಾಗಿದೆ.

ಇಂತಹ ಕಠಿಣ ನಿರ್ಧಾರಗಳಿಂದಾಗಿ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಕಂಪೆನಿಗಳು ಸಿಬ್ಬಂದಿಯನ್ನು ಕಡಿಮೆ ಮಾಡುತ್ತಿವೆ.

ಕೃಪೆ: ಎನ್ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...