Homeಮುಖಪುಟದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ ಹೆಚ್ಚು...

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ ಹೆಚ್ಚು ನಾಗರಿಕರು

- Advertisement -
- Advertisement -

ರಾಜಸ್ಥಾನದ ಬನ್ಸ್ವಾರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡಿದ ಬಿಜೆಪಿಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ 2,200ಕ್ಕೂ ಹೆಚ್ಚು ನಾಗರಿಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದರೆ ಚುನಾವಣಾ ಆಯೋಗ ಈವರೆಗೆ ಪ್ರಧಾನಿ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದೆ ಮೌನವನ್ನು ಮುಂದುವರಿಸಿದೆ.

ಮೋದಿಯ ದ್ವೇಷ ಪೂರಿತ ಹೇಳಿಕೆಯು ಭಾರತದ ಮುಸ್ಲಿಮರ ಮೇಲಿನ ಅಪಾಯಕಾರಿ ಮತ್ತು ನೇರ ದಾಳಿ ಎಂದು ಕರೆದ ನಾಗರಿಕರ ಗುಂಪು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ ಹೇಳಿದೆ. ಇದು ಸಂವಿಧಾನವನ್ನು ಗೌರವಿಸುವ ಲಕ್ಷಾಂತರ ನಾಗರಿಕರ ಭಾವನೆಗಳಿಗೆ ಘಾಸಿಗೊಳಿಸಿದೆ ಎಂದು ಚುನಾವಣಾ ಆಯೋಗಕ್ಕೆ ಹೇಳಲಾಗಿದೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಈ ಬಗ್ಗೆ ಚುನಾವಣಾ ಆಯೋಗದ ಗಮನವನ್ನು ಸೆಳೆದ ನಾಗರಿಕರ ಗುಂಪು, ಮತಗಳನ್ನು ಹುಡುಕುವ ಪ್ರಯತ್ನದಲ್ಲಿ ಮೋದಿಯವರ ಭಾಷೆ ವಿಶ್ವದಲ್ಲಿ ಪ್ರಜಾಪ್ರಭುತ್ವದ ತಾಯಿ ಎಂದು ಕರೆಯಲ್ಪಡುವ ಭಾರತದ ಘನತೆಗೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಇಂತಹ ದ್ವೇಷ ಭಾಷಣದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗದ ವಿಫಲತೆಯು ಅದರ ವಿಶ್ವಾಸಾರ್ಹತೆ ಮತ್ತು ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದಲ್ಲದೆ ಕಮ್ಯುನಿಸ್ಟ್ ಫಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮೋದಿ ಭಾಷಣದ ವಿರುದ್ಧ ದೆಹಲಿಯ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಎಡಪಕ್ಷಗಳು ಈ ಹಿಂದೆ ತಮ್ಮ ದೂರು ದಾಖಲಿಸಲು ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ಆದರೆ ದೂರು ಸ್ವೀಕರಿಸಲು ನಿರಾಕರಿಸಿದ ಕಾರಣ ದೂರನ್ನು ದೆಹಲಿ ಪೊಲೀಸ್‌ ಆಯುಕ್ತರಿಗೆ ನೀಡಲಾಗಿದೆ.

21.04.2024ರಂದು ರಾಜಸ್ಥಾನದ ಭನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮೋದಿ ಮಾಡಿದ ಭಾಷಣದಲ್ಲಿ, ಉದ್ದೇಶಪೂರ್ವಕವಾಗಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಲಾಗಿದೆ. ಪ್ರಧಾನಿ ಮಾಡಿದಂತೆ ದ್ವೇಷ ಭಾಷಣದ ಮೂಲಕ ಮತ ಯಾಚನೆ ಮಾಡುವುದು ಸಂಪೂರ್ಣ ಕಾನೂನುಬಾಹಿರವಾಗಿದೆ ಎಂದು ಸಿಪಿಐ (ಎಂ) ತನ್ನ ಪತ್ರದಲ್ಲಿ ತಿಳಿಸಿತ್ತು.

ಕಾಂಗ್ರೆಸ್‌ ಪಕ್ಷದ ‘ಸಂಪತ್ತು ಮರು ಹಂಚಿಕೆ’ ಭರವಸೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷ ಕೂಡ ದೂರು ನೀಡಿತ್ತು.

ಇದನ್ನು ಓದಿ: ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...