Homeಮುಖಪುಟಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

- Advertisement -
- Advertisement -

ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ ಕಳೆದ 10 ವರ್ಷದ ಅವಧಿಯಲ್ಲಿ ಕೇಸರಿ ಪಕ್ಷಕ್ಕೆ ವಲಸೆ ಬಂದವರು. ಅವರಲ್ಲಿ 90 ಮಂದಿ ಕಳೆದ ಐದು ವರ್ಷ ಅವಧಿಯಲ್ಲಿ ಬಿಜೆಪಿ ಸೇರ್ಪಡೆಗೊಂಡ ಇತರ ಪಕ್ಷದವರಾಗಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅತಿ ಹೆಚ್ಚು ಆರು ಮಂದಿ ಬಿಜೆಪಿ ಅಭ್ಯರ್ಥಿಗಳು ವಲಸಿಗರಾಗಿದ್ದಾರೆ. ಇವರೆಲ್ಲ ಕಾಂಗ್ರೆಸ್‌, ವೈಎಸ್‌ಆರ್‌ಪಿ ಹಾಗೂ ಬಿಜೆಪಿಯ ಈಗಿನ ಮಿತ್ರ ಪಕ್ಷ ಟಿಡಿಪಿಯಿಂದ ವಲಸೆ ಬಂದವರು.

ತೆಲಂಗಾಣದಲ್ಲಿ ಬಿಜೆಪಿಯ 17 ಅಭ್ಯರ್ಥಿಗಳಲ್ಲಿ ಸುಮಾರು ಮೂರನೇ ಎರಡರಷ್ಟು ಅಭ್ಯರ್ಥಿಗಳು ಇತರ ಪಕ್ಷಗಳಿಂದ ವಲಸೆ ಬಂದವರು. ಮುಖ್ಯವಾಗಿ ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದವರು. ಇವರಲ್ಲಿ 11 ಅಭ್ಯರ್ಥಿಗಳು ಚುನಾವಣಾ ಪೂರ್ವದಲ್ಲಿ ಬಿಜೆಪಿ ಸೇರಿದವರು.

ಹರ್ಯಾಣದಲ್ಲಿ ಬಿಜೆಪಿ ಸರ್ಕಾರವಿದ್ದರೂ, 10 ಬಿಜೆಪಿ ಅಭ್ಯರ್ಥಿಗಳ ಪೈಕಿ ಆರು ಮಂದಿ ವಲಸಿಗರಾಗಿದ್ದಾರೆ. ಅವರಲ್ಲಿ ಇಬ್ಬರಾದ ನವೀನ್‌ ಜಿಂದಾಲ್‌ ಮತ್ತು ಅಶೋಕ್‌ ತನ್ವರ್‌, ಲೋಕಸಭಾ ಚುನಾವಣೆಗಿಂತ ಮುನ್ನ ಬಿಜೆಪಿ ಸೇರಿದವರು.

ಪಂಜಾಬ್‌ನಲ್ಲಿ ಬಿಜೆಪಿಯ 13 ಅಭ್ಯರ್ಥಿಗಳ ಪೈಕಿ 7 ಮಂದಿ ವಲಸಿಗರು. ಜಾರ್ಖಂಡ್‌ನಲ್ಲೂ 13 ಅಭ್ಯರ್ಥಿಗಳ ಪೈಕಿ 7 ಮಂದಿ ವಲಸಿಗರಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ 74 ಬಿಜೆಪಿ ಅಭ್ಯರ್ಥಿಗಳ ಪೈಕಿ 23 ಮಂದಿ (ಶೇ. 31ರಷ್ಟು) 2014ರಿಂದೀಚೆಗೆ ಬಿಜೆಪಿ ಸೇರಿದ ಇತರ ಪಕ್ಷದವರಾಗಿದ್ದಾರೆ.

ಒಡಿಶಾದಲ್ಲಿ ಒಟ್ಟು ಬಿಜೆಪಿ ಅಭ್ಯರ್ಥಿಗಳ ಪೈಕಿ ಶೇ. 29, ತಮಿಳುನಾಡಿನಲ್ಲಿ ಶೇ. 26ರಷ್ಟು ಮಂದಿ ವಲಸಿಗರಾಗಿದ್ದಾರೆ.

ಪಶ್ಚಿಮ ಬಂಗಾಳದ 42 ಬಿಜೆಪಿ ಅಭ್ಯರ್ಥಿಗಳ ಪೈಕಿ 19 ಮಂದಿ ವಲಸಿಗರಾಗಿದ್ದರೆ, ಗುಜರಾತ್‌ನಲ್ಲಿ 26 ಅಭ್ಯರ್ಥಿಗಳ ಪೈಕಿ ಇಬ್ಬರು ಇತರ ಪಕ್ಷಗಳಿಂದ ವಲಸೆ ಬಂದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...