Homeಮುಖಪುಟಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

- Advertisement -
- Advertisement -

ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ ಕಳೆದ 10 ವರ್ಷದ ಅವಧಿಯಲ್ಲಿ ಕೇಸರಿ ಪಕ್ಷಕ್ಕೆ ವಲಸೆ ಬಂದವರು. ಅವರಲ್ಲಿ 90 ಮಂದಿ ಕಳೆದ ಐದು ವರ್ಷ ಅವಧಿಯಲ್ಲಿ ಬಿಜೆಪಿ ಸೇರ್ಪಡೆಗೊಂಡ ಇತರ ಪಕ್ಷದವರಾಗಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅತಿ ಹೆಚ್ಚು ಆರು ಮಂದಿ ಬಿಜೆಪಿ ಅಭ್ಯರ್ಥಿಗಳು ವಲಸಿಗರಾಗಿದ್ದಾರೆ. ಇವರೆಲ್ಲ ಕಾಂಗ್ರೆಸ್‌, ವೈಎಸ್‌ಆರ್‌ಪಿ ಹಾಗೂ ಬಿಜೆಪಿಯ ಈಗಿನ ಮಿತ್ರ ಪಕ್ಷ ಟಿಡಿಪಿಯಿಂದ ವಲಸೆ ಬಂದವರು.

ತೆಲಂಗಾಣದಲ್ಲಿ ಬಿಜೆಪಿಯ 17 ಅಭ್ಯರ್ಥಿಗಳಲ್ಲಿ ಸುಮಾರು ಮೂರನೇ ಎರಡರಷ್ಟು ಅಭ್ಯರ್ಥಿಗಳು ಇತರ ಪಕ್ಷಗಳಿಂದ ವಲಸೆ ಬಂದವರು. ಮುಖ್ಯವಾಗಿ ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದವರು. ಇವರಲ್ಲಿ 11 ಅಭ್ಯರ್ಥಿಗಳು ಚುನಾವಣಾ ಪೂರ್ವದಲ್ಲಿ ಬಿಜೆಪಿ ಸೇರಿದವರು.

ಹರ್ಯಾಣದಲ್ಲಿ ಬಿಜೆಪಿ ಸರ್ಕಾರವಿದ್ದರೂ, 10 ಬಿಜೆಪಿ ಅಭ್ಯರ್ಥಿಗಳ ಪೈಕಿ ಆರು ಮಂದಿ ವಲಸಿಗರಾಗಿದ್ದಾರೆ. ಅವರಲ್ಲಿ ಇಬ್ಬರಾದ ನವೀನ್‌ ಜಿಂದಾಲ್‌ ಮತ್ತು ಅಶೋಕ್‌ ತನ್ವರ್‌, ಲೋಕಸಭಾ ಚುನಾವಣೆಗಿಂತ ಮುನ್ನ ಬಿಜೆಪಿ ಸೇರಿದವರು.

ಪಂಜಾಬ್‌ನಲ್ಲಿ ಬಿಜೆಪಿಯ 13 ಅಭ್ಯರ್ಥಿಗಳ ಪೈಕಿ 7 ಮಂದಿ ವಲಸಿಗರು. ಜಾರ್ಖಂಡ್‌ನಲ್ಲೂ 13 ಅಭ್ಯರ್ಥಿಗಳ ಪೈಕಿ 7 ಮಂದಿ ವಲಸಿಗರಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ 74 ಬಿಜೆಪಿ ಅಭ್ಯರ್ಥಿಗಳ ಪೈಕಿ 23 ಮಂದಿ (ಶೇ. 31ರಷ್ಟು) 2014ರಿಂದೀಚೆಗೆ ಬಿಜೆಪಿ ಸೇರಿದ ಇತರ ಪಕ್ಷದವರಾಗಿದ್ದಾರೆ.

ಒಡಿಶಾದಲ್ಲಿ ಒಟ್ಟು ಬಿಜೆಪಿ ಅಭ್ಯರ್ಥಿಗಳ ಪೈಕಿ ಶೇ. 29, ತಮಿಳುನಾಡಿನಲ್ಲಿ ಶೇ. 26ರಷ್ಟು ಮಂದಿ ವಲಸಿಗರಾಗಿದ್ದಾರೆ.

ಪಶ್ಚಿಮ ಬಂಗಾಳದ 42 ಬಿಜೆಪಿ ಅಭ್ಯರ್ಥಿಗಳ ಪೈಕಿ 19 ಮಂದಿ ವಲಸಿಗರಾಗಿದ್ದರೆ, ಗುಜರಾತ್‌ನಲ್ಲಿ 26 ಅಭ್ಯರ್ಥಿಗಳ ಪೈಕಿ ಇಬ್ಬರು ಇತರ ಪಕ್ಷಗಳಿಂದ ವಲಸೆ ಬಂದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...