Homeಮುಖಪುಟಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

- Advertisement -
- Advertisement -

ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ.

ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ ಕಳೆದ 10 ವರ್ಷದ ಅವಧಿಯಲ್ಲಿ ಕೇಸರಿ ಪಕ್ಷಕ್ಕೆ ವಲಸೆ ಬಂದವರು. ಅವರಲ್ಲಿ 90 ಮಂದಿ ಕಳೆದ ಐದು ವರ್ಷ ಅವಧಿಯಲ್ಲಿ ಬಿಜೆಪಿ ಸೇರ್ಪಡೆಗೊಂಡ ಇತರ ಪಕ್ಷದವರಾಗಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅತಿ ಹೆಚ್ಚು ಆರು ಮಂದಿ ಬಿಜೆಪಿ ಅಭ್ಯರ್ಥಿಗಳು ವಲಸಿಗರಾಗಿದ್ದಾರೆ. ಇವರೆಲ್ಲ ಕಾಂಗ್ರೆಸ್‌, ವೈಎಸ್‌ಆರ್‌ಪಿ ಹಾಗೂ ಬಿಜೆಪಿಯ ಈಗಿನ ಮಿತ್ರ ಪಕ್ಷ ಟಿಡಿಪಿಯಿಂದ ವಲಸೆ ಬಂದವರು.

ತೆಲಂಗಾಣದಲ್ಲಿ ಬಿಜೆಪಿಯ 17 ಅಭ್ಯರ್ಥಿಗಳಲ್ಲಿ ಸುಮಾರು ಮೂರನೇ ಎರಡರಷ್ಟು ಅಭ್ಯರ್ಥಿಗಳು ಇತರ ಪಕ್ಷಗಳಿಂದ ವಲಸೆ ಬಂದವರು. ಮುಖ್ಯವಾಗಿ ಬಿಆರ್‌ಎಸ್‌ ಮತ್ತು ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದವರು. ಇವರಲ್ಲಿ 11 ಅಭ್ಯರ್ಥಿಗಳು ಚುನಾವಣಾ ಪೂರ್ವದಲ್ಲಿ ಬಿಜೆಪಿ ಸೇರಿದವರು.

ಹರ್ಯಾಣದಲ್ಲಿ ಬಿಜೆಪಿ ಸರ್ಕಾರವಿದ್ದರೂ, 10 ಬಿಜೆಪಿ ಅಭ್ಯರ್ಥಿಗಳ ಪೈಕಿ ಆರು ಮಂದಿ ವಲಸಿಗರಾಗಿದ್ದಾರೆ. ಅವರಲ್ಲಿ ಇಬ್ಬರಾದ ನವೀನ್‌ ಜಿಂದಾಲ್‌ ಮತ್ತು ಅಶೋಕ್‌ ತನ್ವರ್‌, ಲೋಕಸಭಾ ಚುನಾವಣೆಗಿಂತ ಮುನ್ನ ಬಿಜೆಪಿ ಸೇರಿದವರು.

ಪಂಜಾಬ್‌ನಲ್ಲಿ ಬಿಜೆಪಿಯ 13 ಅಭ್ಯರ್ಥಿಗಳ ಪೈಕಿ 7 ಮಂದಿ ವಲಸಿಗರು. ಜಾರ್ಖಂಡ್‌ನಲ್ಲೂ 13 ಅಭ್ಯರ್ಥಿಗಳ ಪೈಕಿ 7 ಮಂದಿ ವಲಸಿಗರಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ 74 ಬಿಜೆಪಿ ಅಭ್ಯರ್ಥಿಗಳ ಪೈಕಿ 23 ಮಂದಿ (ಶೇ. 31ರಷ್ಟು) 2014ರಿಂದೀಚೆಗೆ ಬಿಜೆಪಿ ಸೇರಿದ ಇತರ ಪಕ್ಷದವರಾಗಿದ್ದಾರೆ.

ಒಡಿಶಾದಲ್ಲಿ ಒಟ್ಟು ಬಿಜೆಪಿ ಅಭ್ಯರ್ಥಿಗಳ ಪೈಕಿ ಶೇ. 29, ತಮಿಳುನಾಡಿನಲ್ಲಿ ಶೇ. 26ರಷ್ಟು ಮಂದಿ ವಲಸಿಗರಾಗಿದ್ದಾರೆ.

ಪಶ್ಚಿಮ ಬಂಗಾಳದ 42 ಬಿಜೆಪಿ ಅಭ್ಯರ್ಥಿಗಳ ಪೈಕಿ 19 ಮಂದಿ ವಲಸಿಗರಾಗಿದ್ದರೆ, ಗುಜರಾತ್‌ನಲ್ಲಿ 26 ಅಭ್ಯರ್ಥಿಗಳ ಪೈಕಿ ಇಬ್ಬರು ಇತರ ಪಕ್ಷಗಳಿಂದ ವಲಸೆ ಬಂದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...