Homeಮುಖಪುಟನಿರುದ್ಯೋಗ, ಸಾಲದ ಸಮಸ್ಯೆಯಿಂದ 3 ವರ್ಷಗಳಲ್ಲಿ 25 ಸಾವಿರ ಭಾರತೀಯರ ಆತ್ಮಹತ್ಯೆ: ಸರ್ಕಾರ

ನಿರುದ್ಯೋಗ, ಸಾಲದ ಸಮಸ್ಯೆಯಿಂದ 3 ವರ್ಷಗಳಲ್ಲಿ 25 ಸಾವಿರ ಭಾರತೀಯರ ಆತ್ಮಹತ್ಯೆ: ಸರ್ಕಾರ

- Advertisement -
- Advertisement -

2018 ಮತ್ತು 2020 ರ ನಡುವೆ 25,000 ಕ್ಕೂ ಹೆಚ್ಚು ಭಾರತೀಯರು ನಿರುದ್ಯೋಗ ಅಥವಾ ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಒಕ್ಕೂಟ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

ಈ ಮೂರು ವರ್ಷದ ಅವಧಿಯಲ್ಲಿ 9,140 ಜನರು ನಿರುದ್ಯೋಗ ಮತ್ತು 16,091 ಜನರು ಆರ್ಥಿಕ ದಿವಾಳಿತನ ಅಥವಾ ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ ಎಂದು ಒಕ್ಕೂಟ ಸರ್ಕಾರವು ರಾಜ್ಯಸಭೆಗೆ ಮಾಹಿತಿ ನೀಡಿದೆ.

ಕಳೆದ ಕೆಲವು ವಾರಗಳಿಂದ ನಿರುದ್ಯೋಗ ಸಮಸ್ಯೆಗಳ ಬಗ್ಗೆ ಪ್ರತಿಪಕ್ಷಗಳು ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ರಾಜ್ಯ ಸಭೆಯಲ್ಲಿ ಈ ವಿಷಯದ ಕುರಿತು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ರಾಜ್ಯ ಸಚಿವ (ಗೃಹ) ನಿತ್ಯಾನಂದ ರೈ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಒದಗಿಸಿದ ದತ್ತಾಂಶವನ್ನು ಸರ್ಕಾರದ ಅಂಕಿಅಂಶಗಳು ಆಧರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ಒಕ್ಕೂಟ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ, 2020 ರ ಸಾಂಕ್ರಾಮಿಕ ವರ್ಷದಲ್ಲಿ ಅತಿ ಹೆಚ್ಚು (3,548) ನಿರುದ್ಯೋಗಿಗಳ ಆತ್ಮಹತ್ಯೆಗಳು ವರದಿಯಾಗಿವೆ . 2018 ರಲ್ಲಿ 2,741 ಮತ್ತು 2019 ರಲ್ಲಿ 2,851 ಮಂದಿ ನಿರುದ್ಯೋಗದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿವಾಳಿತನದಿಂದಾಗಿ, ಸಾಲದಿಂದಾಗಿ 2018 ರಲ್ಲಿ 4,970 ಜನ, 2019 ರಲ್ಲಿ 5,908, 2020 ರಲ್ಲಿ 5,213 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಆರೋಗ್ಯದತ್ತ ಗಮನಹರಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಚಿವರು ಹೇಳಿದ್ದಾರೆ. “ಮಾನಸಿಕ ಅಸ್ವಸ್ಥತೆಗಳ ಹೊರೆಯನ್ನು ಪರಿಹರಿಸಲು, ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ, ಜೊತೆಗೆ ದೇಶದ 692 ಜಿಲ್ಲೆಗಳಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ನಡೆಸಲಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ್ದ ಚಿಕ್ಕಮಗಳೂರಿನವರಾದ ಉಮೆಯಾನಿ (30) ಸಾವಿಗೆ ಶರಣಾಗಿದ್ದಾರೆ.

(ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104)


ಇದನ್ನೂ ಓದಿ: ಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...