Homeಕರ್ನಾಟಕಭಾರತದಿಂದ 300ಕ್ಕೂ ಅಧಿಕ ಜನರು ಬಾಂಗ್ಲಾಕ್ಕೆ ಗಡೀಪಾರು: ಧ್ವನಿ ಎತ್ತಿದ ಮಾನವ ಹಕ್ಕು ಕಾರ್ಯಕರ್ತರು

ಭಾರತದಿಂದ 300ಕ್ಕೂ ಅಧಿಕ ಜನರು ಬಾಂಗ್ಲಾಕ್ಕೆ ಗಡೀಪಾರು: ಧ್ವನಿ ಎತ್ತಿದ ಮಾನವ ಹಕ್ಕು ಕಾರ್ಯಕರ್ತರು

- Advertisement -
- Advertisement -

ನವದೆಹಲಿ: ಭಾರತವು ಅಕ್ರಮ ವಲಸಿಗರೆಂದು ಪರಿಗಣಿಸುವ ಜನರನ್ನು ನೆರೆಯ ಬಾಂಗ್ಲಾದೇಶಕ್ಕೆ ತಳ್ಳುವುದಕ್ಕೆ ಪ್ರಾರಂಭಿಸಿದೆ. ಅಧಿಕಾರಿಗಳು ದೇಶದಿಂದ ಜನರನ್ನು ನಿರಂಕುಶವಾಗಿ ಹೊರಹಾಕುತ್ತಿದ್ದಾರೆ ಎಂದು ಮಾನವ ಹಕ್ಕು ಕಾರ್ಯಕರ್ತರು ಆರೋಪಿಸಿದ್ದಾರೆ.

ಮೇ ತಿಂಗಳಿನಿಂದ, ಈಶಾನ್ಯ ಭಾರತದ ಅಸ್ಸಾಂ ರಾಜ್ಯವು ವಿವಿಧ ನ್ಯಾಯಮಂಡಳಿಗಳು ವಿದೇಶಿಯರೆಂದು ಘೋಷಿಸಿದ 30,000 ಜನರಲ್ಲಿ 303 ಜನರನ್ನು ಬಾಂಗ್ಲಾದೇಶಕ್ಕೆ “ಹಿಂದಕ್ಕೆ ತಳ್ಳಿದೆ” ಎಂದು ಉನ್ನತ ಅಧಿಕಾರಿಯೊಬ್ಬರು ಈ ವಾರದಂದು ಹೇಳಿದ್ದಾರೆ.

ಅಸ್ಸಾಂನಲ್ಲಿರುವ ಅಂತಹ ಜನರು ಸಾಮಾನ್ಯವಾಗಿ ರಾಜ್ಯದಲ್ಲಿ ಕುಟುಂಬಗಳು ಮತ್ತು ಭೂಮಿಯನ್ನು ಹೊಂದಿರುವ ದೀರ್ಘಕಾಲೀನ ನಿವಾಸಿಗಳಾಗಿದ್ದಾರೆ. ಇದು ಮುಸ್ಲಿಂ ಬಹುಸಂಖ್ಯಾತ ಬಾಂಗ್ಲಾದೇಶಕ್ಕೆ ತಮ್ಮ ಬೇರುಗಳನ್ನು ಗುರುತಿಸುವ ಹತ್ತಾರು ಸಾವಿರ ಕುಟುಂಬಗಳಿಗೆ ನೆಲೆಯಾಗಿದೆ.

ಅವರಲ್ಲಿ ಅನೇಕರು ಮತ್ತು ಅವರ ಕುಟುಂಬಗಳನ್ನು ಭಾರತದಲ್ಲಿ ವಿದೇಶಿಯರೆಂದು ತಪ್ಪಾಗಿ ವರ್ಗೀಕರಿಸಲಾಗುತ್ತದೆ ಮತ್ತು ಉನ್ನತ ನ್ಯಾಯಾಲಯಗಳಲ್ಲಿ ನ್ಯಾಯಮಂಡಳಿಯ ತೀರ್ಪುಗಳನ್ನು ಪ್ರಶ್ನಿಸಲು ತುಂಬಾ ಬಡವರಾಗಿರುತ್ತಾರೆ ಎಂದು ಮಾನವ ಹಕ್ಕು ಕಾರ್ಯಕರ್ತರು ಹೇಳಿದ್ದಾರೆ.

ಪ್ರತೀಕಾರದ ಭಯದಿಂದ ಹೆಸರು ಬಹಿರಂಗಪಡಿಸಲು ಇಷ್ಟಪಡದ ಕೆಲವು ಕಾರ್ಯಕರ್ತರು, ಗಡಿಪಾರು ಕಾರ್ಯಾಚರಣೆಯಲ್ಲಿ ಮುಸ್ಲಿಮರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳುತ್ತಾರೆ. ಅಸ್ಸಾಂ ಸರ್ಕಾರದ ವಕ್ತಾರರು ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ.

ಬಾಂಗ್ಲಾದೇಶದೊಂದಿಗೆ 260 ಕಿಮೀ (160 ಮೈಲಿ) ಗಡಿಯನ್ನು ಹೊಂದಿರುವ ಅಸ್ಸಾಂ, ಕಳೆದ ತಿಂಗಳು ತನ್ನ ವಿದೇಶಿಯರ ನ್ಯಾಯಮಂಡಳಿಗಳಿಂದ ವಿದೇಶಿಯರೆಂದು ಘೋಷಿಸಲ್ಪಟ್ಟ ಜನರನ್ನು ವಾಪಸ್ ಕಳುಹಿಸಲು ಪ್ರಾರಂಭಿಸಿತು. ಇಂತಹ ಕ್ರಮವು ಅಸ್ಸಾಂನಲ್ಲಿ ರಾಜಕೀಯವಾಗಿ ಜನಪ್ರಿಯವಾಗಿದೆ. ಅಲ್ಲಿ ಬಾಂಗ್ಲಾದೇಶದಲ್ಲಿ ಸಂಭಾವ್ಯ ಸಂಬಂಧದ ಬೇರುಗಳನ್ನು ಹೊಂದಿರುವ ಬಂಗಾಳಿ ಭಾಷೆ ಮಾತನಾಡುವವರು ಸ್ಥಳೀಯ ಅಸ್ಸಾಮಿ ಭಾಷಿಕರೊಂದಿಗೆ ಉದ್ಯೋಗ ಮತ್ತು ಸಂಪನ್ಮೂಲಗಳಿಗಾಗಿ ಪೈಪೋಟಿ ನಡೆಸುತ್ತಾರೆ.

ವಿದೇಶಿಯರ ಗಡಿಪಾರು ಕುರಿತು ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್‌ನಿಂದ ಒತ್ತಡವಿದೆ. ನಾವು 303 ಜನರನ್ನು ಹಿಂದಕ್ಕೆ ತಳ್ಳಿದ್ದೇವೆ. ಈ ಗಡಿಪಾರನ್ನು ತೀವ್ರಗೊಳಿಸಲಾಗುವುದು. ರಾಜ್ಯದ ಉಳಿವಿಗೆ ನಾವು ಹೆಚ್ಚು ಸಕ್ರಿಯ ಮತ್ತು ಪೂರ್ವಭಾವಿಯಾಗಿರಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ರಾಜ್ಯ ವಿಧಾನಸಭೆಗೆ ತಿಳಿಸಿದರು.

ವಿದೇಶಿಯರನ್ನು ಗಡೀಪಾರು ಮಾಡುವ ಬಗ್ಗೆ ಏಕೆ ಮುಂದಾಗಿಲ್ಲ ಎಂದು ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಅಸ್ಸಾಂ ಅನ್ನು ಪ್ರಶ್ನಿಸಿದ್ದನ್ನು ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

ಮುಖ್ಯಮಂತ್ರಿಯ ಈ ಹೇಳಿಕೆಗೆ ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೇನ್ ಅವರಿಗೆ ಕೋರಿ ಬಂದ ಇಮೇಲ್‌ಗೆ ತಕ್ಷಣ ಉತ್ತರಿಸಲಿಲ್ಲ. ಭಾರತದಿಂದ ಜನರನ್ನು ತಮ್ಮ ದೇಶಕ್ಕೆ ಕಳುಹಿಸಲಾಗುತ್ತಿದೆ ಮತ್ತು ಸರ್ಕಾರವು ಅದರ ಬಗ್ಗೆ ನವದೆಹಲಿಯೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಕಳೆದ ವಾರ ವರದಿಗಾರರಿಗೆ ತಿಳಿಸಿದ್ದರು.

ಪೌರತ್ವ ಪ್ರಕರಣಗಳ ವಿರುದ್ಧ ನಿಯಮಿತವಾಗಿ ಹೋರಾಡುವ ಮತ್ತು ಈಗ ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ಸಿನ ಸದಸ್ಯರಾಗಿರುವ ಅಸ್ಸಾಂ ಮೂಲದ ವಕೀಲ ಅಮನ್ ವಾದುದ್ ಅವರು, ಸರ್ಕಾರವು ದೇಶದಿಂದ ಜನರನ್ನು ನಿರಂಕುಶವಾಗಿ ಹೊರಹಾಕುತ್ತಿದೆ ಎಂದು ಆರೋಪಿಸಿದರು.

ನೆಲದಲ್ಲಿ ಬಹಳಷ್ಟು ಭೀತಿ ಇದೆ. ಅದು ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದು ಅವರು ಹೇಳಿದರು.

ಕೆಲವರನ್ನು ಹಿಂತಿರುಗಿಸಲಾಗಿದೆ

ಯಾವುದೇ ನಿಜವಾದ ಭಾರತೀಯ ನಾಗರಿಕರನ್ನು ಹೊರಹಾಕಲಾಗುವುದಿಲ್ಲ ಎಂದು ಶರ್ಮಾ ಹೇಳಿದ್ದಾರೆ. ಆದರೆ ಗಡೀಪಾರು ಮಾಡಲಾದವರಲ್ಲಿ ನಾಲ್ವರು ಜನರನ್ನು ಭಾರತಕ್ಕೆ ಹಿಂದಿರುಗಿ ಕರೆ ತರಲಾಗಿದೆ. ಏಕೆಂದರೆ ಅವರ ಭಾರತೀಯರಲ್ಲದ ಸ್ಥಾನಮಾನವನ್ನು ಪ್ರಶ್ನಿಸುವ ಮೇಲ್ಮನವಿಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇವೆ ಎಂದು ಅವರು ಹೇಳಿದರು.

ಅವರಲ್ಲಿ ಒಬ್ಬರು 51 ವರ್ಷದ ಮಾಜಿ ಸರ್ಕಾರಿ ಶಾಲಾ ಶಿಕ್ಷಕ ಖೈರುಲ್ ಇಸ್ಲಾಂ ಅವರನ್ನು ಹಿಂದಕ್ಕೆ ಕರೆ ತರಲಾಗಿದೆ. ಅವರನ್ನು 2016ರಲ್ಲಿ ನ್ಯಾಯಮಂಡಳಿಯು ವಿದೇಶಿಯರೆಂದು ಘೋಷಿಸಿತು. ಅವರು ಎರಡು ವರ್ಷಗಳ ಕಾಲ ಅಸ್ಸಾಂ ಬಂಧನ ಕೇಂದ್ರದಲ್ಲಿ ಕಳೆದರು ಮತ್ತು ಆಗಸ್ಟ್ 2020ರಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಮೇ 23ರಂದು ಪೊಲೀಸರು ಅವರನ್ನು ತಮ್ಮ ಮನೆಯಿಂದ ಕರೆದುಕೊಂಡು ಹೋಗಿ ಬಂಧನ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿಂದ ಅವರನ್ನು ಮತ್ತು ಇತರ 31 ಜನರನ್ನು ಭಾರತೀಯ ಗಡಿ ಭದ್ರತಾ ಪಡೆಯವರು ಸುತ್ತುವರೆದ ವ್ಯಾನ್‌ಗೆ ತುಂಬಿಸಿದರು. ಅಲ್ಲಿ ಅವರಿಗೆ ಕಣ್ಣುಗಳಿಗೆ ಬಟ್ಟೆ ಕಟ್ಟಿ, ಕೈಗಳನ್ನು ಕಟ್ಟಿದರು ಎಂದು ಅವರು ಹೇಳಿದರು.

ನಂತರ, ನಮ್ಮಲ್ಲಿ 14 ಜನರನ್ನು ಮತ್ತೊಂದು ಟ್ರಕ್‌ಗೆ ಹಾಕಲಾಯಿತು. ನಮ್ಮನ್ನು ಗಡಿಯುದ್ದಕ್ಕೂ ಕರೆದುಕೊಂಡು ಹೋಗುತ್ತಾ ಒಂದು ಸ್ಥಳದಲ್ಲಿ ಬಾಂಗ್ಲಾದೇಶಕ್ಕೆ ನೂಕಿದರು. ಇದು ಭಯಾನಕವಾಗಿತ್ತು. ನಾನು ಎಂದಿಗೂ ಅಂತಹ ಅನುಭವವನ್ನು ಅನುಭವಿಸಿಲ್ಲ. ಆಗ ತಡರಾತ್ರಿಯಾಗಿತ್ತು. ಅಲ್ಲೊಂದು ನೇರ ರಸ್ತೆ ಇತ್ತು ಮತ್ತು ನಾವೆಲ್ಲರೂ ಅದರ ಉದ್ದಕ್ಕೂ ನಡೆಯಲು ಪ್ರಾರಂಭಿಸಿದೆವು ಎಂದು ಶಿಕ್ಷಕ ಖೈರುಲ್ ಇಸ್ಲಾಂ ಹೇಳಿದರು.

ಬಾಂಗ್ಲಾದೇಶದ ಹಳ್ಳಿಯ ನಿವಾಸಿಗಳು ಆಗ ಬಾಂಗ್ಲಾದೇಶದ ಗಡಿ ಭದ್ರತಾ ಪಡೆಯವರಿಗೆ ಮಾಹಿತಿ ನೀಡಿದರು. ನಂತರ ಅವರು ನಮ್ಮ 14 ಜನರ ಗುಂಪನ್ನು ಎರಡೂ ದೇಶಗಳ ನಡುವಿನ ನಿರ್ಜನ ಪ್ರದೇಶದೊಳಕ್ಕೆ ತಳ್ಳಿದರು ಎಂದು ಇಸ್ಲಾಂ ಹೇಳಿದರು.

ಇಡೀ ದಿನ ನಾವು ಸುಡು ಬಿಸಿಲಿನಲ್ಲಿ ಬಯಲು ಮೈದಾನದಲ್ಲಿ ನಿಂತಿದ್ದೆವು ಎಂದು ಅವರು ತಿಳಿಸಿದರು.

ನಂತರ, ನಮ್ಮ ಗುಂಪನ್ನು ಬಾಂಗ್ಲಾದೇಶ ಭದ್ರತಾ ಶಿಬಿರಕ್ಕೆ ಕರೆದೊಯ್ಯಲಾಯಿತು. ಆದೇ ವೇಳೆ ಇಸ್ಲಾಂ ಅವರ ಪತ್ನಿ ಅಸ್ಸಾಂನ ಪೊಲೀಸರಿಗೆ ತಮ್ಮ ಪತಿಯ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಅವರನ್ನು ಮರಳಿ ಕರೆತರಬೇಕೆಂದು ಹೇಳಿದರು.

ಕೆಲವು ದಿನಗಳ ನಂತರ, ನನ್ನನ್ನು ಇದ್ದಕ್ಕಿದ್ದಂತೆ ಭಾರತೀಯ ಪೊಲೀಸರಿಗೆ ಹಸ್ತಾಂತರಿಸಲಾಯಿತು. ನಾನು ಮನೆಗೆ ಹಿಂದಿರುಗಿದ್ದು ಹೀಗೆಯೇ. ನನ್ನೊಂದಿಗಿದ್ದ ಇತರರಿಗೆ ಏನಾಯಿತು ಅಥವಾ ಅವರು ಎಲ್ಲಿದ್ದಾರೆಂದು ನನಗೆ ತಿಳಿದಿಲ್ಲ ಎಂದು ಅವರು ಹೇಳಿದರು.

ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆಂದು ಪರಿಗಣಿಸಲಾದ ಜನರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದು ಅಸ್ಸಾಂ ಮಾತ್ರವಲ್ಲ. ಗುಜರಾತಿನ ಅಹಮದಾಬಾದ್‌ನಲ್ಲಿ 250ಕ್ಕೂ ಹೆಚ್ಚು ಜನರು ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರು ಎಂದು ದೃಢಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ರಾಜಿಯನ್ ಹೇಳಿದ್ದಾರೆ.

ಹನಿಮೂನ್ ಹತ್ಯೆ: ಮೇಘಾಲಯ ಜನರ ಕುರಿತು ಮಾಧ್ಯಮಗಳಿಂದ ಅಪಪ್ರಚಾರ; ಕ್ಷಮೆಗೆ ಒತ್ತಾಯಿಸಿ ರ‍್ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The alleged foreigner, agrived by the order any court, he cannot be deprived to challenge the same in the higher court as per theme of our Constitution. The law of the land, provide an opportunity to fole appeal on free of cost. Therefore I suggested to approach National Legal Services Authority for getting free legal aid.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...