Homeಮುಖಪುಟಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್ ಘಟಕದ ರಕ್ಷಣಾ ಗೋಡೆಯು ಪ್ರವಾಹದ ಹೊಡೆತಕ್ಕೆ ಕುಸಿದು ಬಿದ್ದಿದ್ದರಿಂದ, ಘಟಕದಲ್ಲಿದ್ದ ಸುಮಾರು 3,000 ಗ್ಯಾಸ್ ಸಿಲಿಂಡರ್‌ಗಳು ಪಾತಾಳಗಂಗಾ ನದಿಯ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಬಾಟ್ಲಿಂಗ್ ಆವರಣಕ್ಕೆ ನುಗ್ಗಿದ ನೀರು ಇಷ್ಟೊಂದು ದೊಡ್ಡ ಪ್ರಮಾಣದ ಸಿಲಿಂಡರ್‌ಗಳನ್ನು ಕೊಚ್ಚಿಕೊಂಡು ಹೋಗಿದೆ. ನದಿಯ ಪ್ರವಾಹದ ಮೇಲೆ ಸಾವಿರಾರು ಸಿಲಿಂಡರ್‌ಗಳು ತೇಲುತ್ತಾ ಸಾಗುತ್ತಿರುವ ದೃಶ್ಯಗಳನ್ನು ಕಂಡು ಸೇತುವೆಯ ಮೇಲಿದ್ದ ಸಾರ್ವಜನಿಕರು ಆಶ್ಚರ್ಯ ಮತ್ತು ಆತಂಕದಿಂದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಸಿಲಿಂಡರ್‌ಗಳು ಪಾತಾಳಗಂಗಾ ನದಿಯಿಂದ ಮುಂದೆ ಖಾರ್ಪಾಡಾ ನದಿಯವರೆಗೂ ಕೊಚ್ಚಿ ಹೋಗಿವೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಮನೆಗೆ ಕೊಂಡೊಯ್ಯಬೇಡಿ, ಜೀವಕ್ಕೆ ಅಪಾಯ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಎಚ್ಚರಿಕೆ

ನದಿಯಲ್ಲಿ ತೇಲುತ್ತಿರುವ ಕೆಲವು ಸಿಲಿಂಡರ್‌ಗಳಲ್ಲಿ ಅನಿಲ (ಗ್ಯಾಸ್) ತುಂಬಿರುವ ಸಾಧ್ಯತೆಯಿರುವುದರಿಂದ ನದಿ ತೀರದ ಜನರಲ್ಲಿ ತೀವ್ರ ಆತಂಕ ಮೂಡಿದೆ. ಈ ಕುರಿತು ತಕ್ಷಣವೇ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ರಾಯಗಢ ಜಿಲ್ಲಾಧಿಕಾರಿ ಕಿಶನ್ ಜಾವ್ಲೆ ಅವರು, ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ಸಿಲಿಂಡರ್‌ಗಳಲ್ಲಿ ಗ್ಯಾಸ್ ಇದೆಯೇ ಅಥವಾ ಅವು ಸುರಕ್ಷಿತ ಸ್ಥಿತಿಯಲ್ಲಿವೆಯೇ ಎಂಬ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ. ಸಾರ್ವಜನಿಕರು ಕುತೂಹಲಕ್ಕಾಗಲಿ ಅಥವಾ ಬಳಕೆಯ ಆಸೆಗೆ ಬಿದ್ದಾಗಲಿ ಅವುಗಳನ್ನು ಮನೆಗೆ ಕೊಂಡೊಯ್ಯುವುದು, ಕೀಳುವುದು ಅಥವಾ ತೆರೆಯಲು ಯತ್ನಿಸುವುದು ಅತ್ಯಂತ ಅಪಾಯಕಾರಿ, ಎಂದು ಎಚ್ಚರಿಸಿದ್ದಾರೆ.

ಅಲ್ಲದೆ, ನದಿ ತೀರದಲ್ಲಿ ಎಲ್ಲಾದರೂ ಈ ಸಿಲಿಂಡರ್‌ಗಳು ಪತ್ತೆಯಾದರೆ ತಕ್ಷಣವೇ ಕಂಪನಿಯ ಅಧಿಕಾರಿಗಳಿಗೆ ಅಥವಾ ಸ್ಥಳೀಯ ಆಡಳಿತಕ್ಕೆ ಹಸ್ತಾಂತರಿಸಿ ಸಹಕರಿಸಬೇಕೆಂದು ಅವರು ನದಿ ತೀರದ ನಾಗರಿಕರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ರಾಯಗಢ:

ಕಳೆದ ಒಂದು ವಾರದಿಂದ ಮಹಾರಾಷ್ಟ್ರದಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆ ಮುಂಬೈ ಸೇರಿದಂತೆ ಹಲವು ಜಿಲ್ಲೆಗಳನ್ನು ಜಲಾವೃತಗೊಳಿಸಿದೆ. ರಾಯಗಢ ಜಿಲ್ಲೆಯು ಈ ಪ್ರವಾಹದಿಂದ ಅತಿ ಹೆಚ್ಚು ಹಾನಿಗೊಳಗಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಾರ್ಪೊರೇಟ್ ಘಟಕಗಳ ರಕ್ಷಣಾ ಗೋಡೆಗಳು ಮತ್ತು ಮೂಲಸೌಕರ್ಯಗಳ ವೈಜ್ಞಾನಿಕ ಸುರಕ್ಷತೆಯ ಬಗ್ಗೆಯೂ ಈ ಘಟನೆ ಪ್ರಮುಖ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...