Homeಕರೋನಾ ತಲ್ಲಣ35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ಕರ್ನಾಟಕದಲ್ಲಿ ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌, ಆರ್ಥಿಕ ಕುಸಿತದ ಕಾರಣಗಳಿಂದಾಗಿ ಸಂಬಳ ನೀಡಲಾಗದ ಕಾರಣಕ್ಕೆ ಕರ್ನಾಟಕದ 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಎಜುಕೇಶನ್ ವರ್ಲ್ಡ್ ವರದಿ ಮಾಡಿದೆ.

ಕೋವಿಡ್ -19 ರ ಪರಿಣಾಮವಾಗಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹೆಚ್ಚಿನ ಪೋಷಕರು ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಿಲ್ಲವಾದ್ದರಿಂದ, ಇದು ‍ಅಲ್ಲಿನ ಶಿಕ್ಷಕರ ಕೆಲಸಕ್ಕೆ ಕುತ್ತು ತಂದಿದೆ ಎನ್ನಲಾಗಿದೆ. ಆನ್‌ಲೈನ್‌ ಕ್ಲಾಸುಗಳನ್ನು ನಡೆಸಲು ಉತ್ಸಾದ ತೋರಿಸುತ್ತಿರುವ ಶಾಲಾ ಆಡಳಿತ ಮಂಡಳಿಗಳು ಇದಕ್ಕಾಗಿ ಶಿಕ್ಷಕರನ್ನು ಕೆಲಸದಿಂದ ವಜಾಗೊಳಿಸುತ್ತಿದ್ದಾರೆ.

ಇನ್ನು ಕೆಲವೆಡೆ ಸರ್ಕಾರದ ಆದೇಶದ ಹೊರತಾಗಿಯೂ ಹಲವಾರು ಖಾಸಗಿ ಶಾಲೆಗಳು ಪೋಷಕರಿಂದ ಶುಲ್ಕ ಕಟ್ಟಿಸಿಕೊಳ್ಳುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಪ್ರತಿಕ್ರಿಯಿಸಿ “ಕರ್ನಾಟಕ ಸರ್ಕಾರಕ್ಕೆ ಪರಿಸ್ಥಿತಿಯ ಬಗ್ಗೆ ತಿಳಿದಿದೆ. ಖಾಸಗಿ ಶಾಲೆಗಳು ಶಿಕ್ಷಕರಿಗೆ ಸಂಬಳ ಪಾವತಿಸಲು ಪೋಷಕರಿಂದ ಶುಲ್ಕ ಸಂಗ್ರಹಿಸಲು ಒತ್ತಾಯಿಸುತ್ತಿವೆ. ಆದರೆ ಪೋಷಕರು ಶಿಕ್ಷಣ ಸಂಸ್ಥೆಗಳಿಗೆ ಪಾವತಿಸುವ ಸ್ಥಿತಿಯಲ್ಲಿಲ್ಲ. ನಾವು ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದಿದ್ದಾರೆ.

ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಉದ್ಯೋಗ ಕಳೆದುಕೊಂಡ ಕರ್ನಾಟಕ ಖಾಸಗಿ ಶಾಲಾ ಶಿಕ್ಷಕರ ಬಗ್ಗೆ ಮಾತನಾಡಿ “ರಾಜ್ಯಾದ್ಯಂತ ಖಾಸಗಿ ಶಾಲೆಗಳು 35,000 ಶಿಕ್ಷಕರನ್ನು ವಜಾ ಮಾಡಿದೆ. ಅವರಲ್ಲಿ ಹೆಚ್ಚಿನವರು ನರ್ಸರಿ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು” ಎಂದಿದ್ದಾರೆ.

ತಮಿಳುನಾಡು ಸರ್ಕಾರವು ಖಾಸಗಿ ಶಾಲೆಗಳು ಶುಲ್ಕ ಸಂಗ್ರಹಿಸುವುದನ್ನು ನಿಷೇಧಿಸಿ ಏಪ್ರಿಲ್ 20ರಂದು ಆದೇಶ ಹೊರಡಿಸಿದೆ. ಇದರ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ನಡುವೆ ಮದ್ರಾಸ್ ಹೈಕೋರ್ಟ್ “ಖಾಸಗಿ ಶಿಕ್ಷಣ ಸಂಸ್ಥೆಗಳು ಕನಿಷ್ಠ ಶುಲ್ಕವನ್ನು ಸಂಗ್ರಹಿಸಲು ಸಾಧ್ಯವಾಗದಿದ್ದರೂ ತಮ್ಮ ಸಿಬ್ಬಂದಿಗೆ ಸಂಬಳ ನೀಡಬೇಕೆಂದು ಹೇಗೆ ನಿರೀಕ್ಷಿಸುತ್ತೀರಿ” ಎಂದು ತಮಿಳುನಾಡು ಸರ್ಕಾರಕ್ಕೆ ಪ್ರಶ್ನಿಸಿದೆ. ರಾಜ್ಯದ ಆದೇಶದ ವಿರುದ್ಧ ಸಲ್ಲಿಸಿದ ಮನವಿಗೆ ಸ್ಪಂದಿಸುವಂತೆ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಆರ್ ಮಹಾದೇವನ್, “ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಸಂಬಳ ನೀಡಬೇಕು ಎಂಬುದು ಸರ್ಕಾರದ ನೀತಿ ನಿರ್ಧಾರವಾಗಿದೆ. ಆದರೆ ಕನಿಷ್ಠ ಶುಲ್ಕವನ್ನು ಸಹ ಸಂಗ್ರಹಿಸುವುದನ್ನು ನಿಷೇಧಿಸಿದರೆ, ಅವರು ಸಂಬಳ ಪಾವತಿಸಬೇಕೆಂದು ಸರ್ಕಾರ ಹೇಗೆ ನಿರೀಕ್ಷಿಸಬಹುದು? ವಿಶೇಷವಾಗಿ ಹೆಚ್ಚಿನ ಸಂಸ್ಥೆಗಳು ಆನ್‌ಲೈನ್ ತರಗತಿಗಳನ್ನು ನಡೆಸುತ್ತಿರುವಾಗ ಸಂಬಳ ನೀಡುವುದು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿ ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕೆಯ ವರದಿಯೊಂದನ್ನು ಟ್ವೀಟ್ ಮಾಡಿರುವ ಅವರು, ಕರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...