Homeಮುಖಪುಟಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು

ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು

- Advertisement -
- Advertisement -

ದೇಶದಾದ್ಯಂತ ಕ್ರೈಸ್ತರನ್ನು ಗುರಿಯಾಗಿಸಿ ನಡೆಯುತ್ತಿರುವ ಹಿಂಸಾಚಾರದ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿ 400ಕ್ಕೂ ಹೆಚ್ಚು ಹಿರಿಯ ಕ್ರೈಸ್ತ ನಾಯಕರು ಮತ್ತು 30 ಚರ್ಚ್ ಗುಂಪುಗಳು ಡಿಸೆಂಬರ್ 31, 2024ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕ್ರಿಸ್‌ಮಸ್‌ ವೇಳೆ ದೇಶದಾದ್ಯಂತ 14ಕ್ಕೂ ಹೆಚ್ಚು ಕ್ರಿಶ್ಚಿಯನ್ ಕೂಟಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ, ಬೆದರಿಕೆಯ ಘಟನೆಗಳು ನಡೆದ ಬಗ್ಗೆ ವರದಿಯಾದ ಬಳಿಕ ರಾಷ್ಟ್ರಪತಿ ಮತ್ತು ಪ್ರಧಾನಿಗೆ ಪತ್ರ ಬರೆಯಲಾಗಿದೆ.

ಪ್ರಮುಖ ಕ್ರೈಸ್ತ ನಾಯಕರಾದ ಥಾಮಸ್ ಅಬ್ರಹಾಂ, ಡೇವಿಡ್ ಒನೆಸಿಮು, ಜೋಬ್ ಲೋಹರಾ, ರಿಚರ್ಡ್ ಹೋವೆಲ್, ಮೇರಿ ಸ್ಕೇರಿಯಾ, ಸೆಡ್ರಿಕ್ ಪ್ರಕಾಶ್ ಎಸ್.ಜೆ., ಜಾನ್ ದಯಾಲ್, ಪ್ರಕಾಶ್ ಲೂಯಿಸ್ ಎಸ್.ಜೆ., ಝೆಲ್ಹೌ ಕೀಹೋ, ಇ.ಹೆಚ್. ಖಾರ್ಕೊಂಗೊರ್, ಅಲೆನ್ ಬ್ರೂಕ್ಸ್, ಕೆ. ಲೊಸಿ ಮಾವೊ, ಅಖಿಲೇಶ್ ಎಡ್ಗರ್, ಮೈಕೆಲ್ ವಿಲಮ್ಸ್, ಎ.ಸಿ. ಮೈಕೆಲ್ ಮತ್ತು ವಿಜಯೇಶ್ ಲಾಲ್ ಪತ್ರಕ್ಕೆ ಸಹಿ ಹಾಕಿದ್ದು, ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ದ್ವೇಷದ ಆತಂಕಕಾರಿ ಪ್ರವೃತ್ತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇವಾಂಜೆಲಿಕ್ ಫೆಲೋಶಿಪ್ ಆಫ್ ಇಂಡಿಯಾ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ (ಯುಸಿಎಫ್‌) ವರದಿ ಮಾಡಿದ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದ ಅಂಕಿ ಅಂಶಗಳನ್ನು ಪತ್ರದಲ್ಲಿ ಗಮನ ಸೆಳೆಯಲಾಗಿದೆ.

ಮತಾಂತರ-ವಿರೋಧಿ ಕಾನೂನುಗಳ ದುರುಪಯೋಗ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಹೆಚ್ಚುತ್ತಿರುವ ಬೆದರಿಕೆಗಳು, ಹೆಚ್ಚುತ್ತಿರುವ ದ್ವೇಷದ ಮಾತುಗಳು ಮತ್ತು ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ನಿರಾಕರಿಸುವ ಬಹಿಷ್ಕಾರ ನೀತಿಗಳು ಸೇರಿದಂತೆ ಹಲವು ವಿಷಯಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೇ 2023 ರಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ. 360 ಚರ್ಚ್‌ಗಳನ್ನು ನಾಶಪಡಿಸಲಾಗಿದೆ. ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ಮಣಿಪುರದಲ್ಲಿ ಶಾಂತಿ, ಸಾಮರಸ್ಯವನ್ನು ಸ್ಥಾಪಿಸುವಲ್ಲಿ ಪ್ರಧಾನಿ ನೇತೃತ್ವ ವಹಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.

ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಡೆಯುವ ಹಿಂಸಾಚಾರ ಘಟನೆಗಳ ಬಗ್ಗೆ ತ್ವರಿತ ಮತ್ತು ನಿಷ್ಪಕ್ಷಪಾತ ತನಿಖೆಗೆ ಆದೇಶಿಸುವುದು, ಧಾರ್ಮಿಕ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವ ಬಗ್ಗೆ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡುವುದು, ಎಲ್ಲಾ ಸಮುದಾಯಗಳ ಪ್ರತಿನಿಧಿಗಳ ಜೊತೆ ನಿರಂತರ ಮಾತುಕತೆ ನಡೆಸುವುದು, ಒಬ್ಬರ ನಂಬಿಕೆಯನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಅಭ್ಯಾಸ ಮಾಡುವ ಮೂಲಭೂತ ಹಕ್ಕನ್ನು ರಕ್ಷಿಸುವುದು ಸೇರಿದಂತೆ ಪರಿಸ್ಥಿತಿಯನ್ನು ಪರಿಹರಿಸಲು ಗಟ್ಟಿಯಾದ ನಿಲುವುಗಳನ್ನು ತೆಗೆದುಕೊಳ್ಳುವಂತೆ ಕ್ರೈಸ್ತ ಮುಖಂಡರು ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...