Homeಅಂತರಾಷ್ಟ್ರೀಯ9 ದಿನಗಳ ಇಸ್ರೇಲ್ ದಾಳಿಯಲ್ಲಿ 400 ಕ್ಕೂ ಹೆಚ್ಚು ಜನರು ಸಾವು - ಇರಾನ್

9 ದಿನಗಳ ಇಸ್ರೇಲ್ ದಾಳಿಯಲ್ಲಿ 400 ಕ್ಕೂ ಹೆಚ್ಚು ಜನರು ಸಾವು – ಇರಾನ್

- Advertisement -
- Advertisement -

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. 9 ದಿನಗಳ ಇಸ್ರೇಲ್

ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನಿಡಿದ್ದಾರೆ.

ಹೊಸೈನ್ ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಹೇಳಿಕೆಯಲ್ಲಿ, ಒಂಬತ್ತು ದಿನಗಳ ದಾಳಿಯಲ್ಲಿ 54 ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 400 ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 3,056 ಇತರರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ನಾಗರಿಕರು ಹೆಚ್ಚಿನ ಸಾವುನೋವುಗಳಿಗೆ ಒಳಪಟ್ಟಿದ್ದಾರೆ ಎಂದು ಹೊಸೈನ್ ಹೇಳಿದ್ದಾರೆ.

“ಗಾಯಗೊಂಡವರಲ್ಲಿ 2,220 ಜನರಿಗೆ ಆರೋಗ್ಯ ಸಚಿವಾಲಯದ ಆಸ್ಪತ್ರೆಗಳಿಂದ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಆದರೆ 232 ಜನರಿಗೆ ದಾಳಿಯ ಸ್ಥಳದಲ್ಲಿ ಹೊರರೋಗಿ ಆರೈಕೆ ನೀಡಲಾಗಿದೆ. ಈ ಅವಧಿಯಲ್ಲಿ, ದೇಶಾದ್ಯಂತ ನಮ್ಮ ಸಮರ್ಪಿತ ವೈದ್ಯಕೀಯ ತಂಡಗಳು ಗಾಯಾಳುಗಳಿಗೆ 457 ಶಸ್ತ್ರಚಿಕಿತ್ಸೆಗಳನ್ನು ಮಾಡಿವೆ.” ಎಂದು ಅವರು ಹೇಳಿದ್ದಾರೆ.

ಈ ನಡುವೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುತ್ತಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅಮೆರಿಕದ ಗುಪ್ತಚರ ಇಲಾಖೆಯ ಹೇಳಿಕೆಯನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿರೋಧಿಸಿದ್ದಾರೆ. ಈ ಹೇಳಿಕೆ ತಪ್ಪು ಎಂದು ಟ್ರಂಪ್ ತಮ್ಮ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಬಹಿರಂಗವಾಗಿ ಖಂಡಿಸಿದ್ದಾರೆ.

ಮತ್ತೊಂದೆಡೆ, ಟೆಹ್ರಾನ್‌ನ ಪರಮಾಣು ಕಾರ್ಯಕ್ರಮವನ್ನು ನಾಶ ಮಾಡುವವರೆಗೆ ಇರಾನ್ ಮೇಲಿನ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಶುಕ್ರವಾರ ಪ್ರತಿಜ್ಞೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಈ ಹೇಳಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ.

“ನಮ್ಮ ಮನೆಗಳು, ನಮ್ಮ ಕುಟುಂಬಗಳು ಮತ್ತು ನಮ್ಮ ಮಕ್ಕಳಿಗೆ ಬೆದರಿಕೆಯಿದ್ದರೂ, ನಾವು ದಾಳಿ ನಿಲ್ಲಿಸುವುದಿಲ್ಲ. ಇರಾನ್‌ನ ಪರಮಾಣು ಬೆದರಿಕೆಯನ್ನು ನಾಶ ಮಾಡುವವರೆಗೆ, ಅದರ ಯುದ್ಧ ಯಂತ್ರವನ್ನು ನಿಶ್ಯಸ್ತ್ರಗೊಳಿಸುವವರೆಗೆ, ನಮ್ಮ ಜನರು ಮತ್ತು ನಿಮ್ಮ ಜನರು ಸುರಕ್ಷಿತವಾಗಿರುವರೆಗೆ ದಾಳಿ ನಿಲ್ಲಿಸುವುದಿಲ್ಲ” ಎಂದು ಇಸ್ರೇಲಿ ವಿಶ್ವಸಂಸ್ಥೆಯ ರಾಯಭಾರಿ ಡ್ಯಾನಿ ಡ್ಯಾನನ್ ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಇರಾನಿನ ರಾಯಭಾರಿ ಅಮೀರ್ ಸಯೀದ್ ಇರಾವನಿ, ಇಸ್ರೇಲಿ ದಾಳಿಗಳನ್ನು ನಿಲ್ಲಿಸಲು ಭದ್ರತಾ ಮಂಡಳಿಯು ಕ್ರಮ ಕೈಗೊಳ್ಳಬೇಕೆಂದು ಈ ವೇಳೆ ಒತ್ತಾಯಿಸಿದ್ದಾರೆ. “ಈ ದಾಳಿಯನ್ನು ಇಸ್ರೇಲ್ ಎಷ್ಟು ದಿನಗಳವರೆಗೆ ಮುಂದುವರಿಸುತ್ತದೆ ಎಂದು ಸ್ಪಷ್ಟವಾಗಿ ಘೋಷಿಸಿದೆ. ಅಮೆರಿಕ ಈ ಯುದ್ಧಕ್ಕೆ ಸೇರುವ ಸಾಧ್ಯತೆಯಿದೆ ಎಂಬ ವಿಶ್ವಾಸಾರ್ಹ ವರದಿಯ ಬಗ್ಗೆ ನಮಗೆ ಎಚ್ಚರಿಕೆ ಬಂದಿದೆ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೆ ಎಂಬುವುದನ್ನು ಎರಡು ವಾರಗಳಲ್ಲಿ ನಿರ್ಧರಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದಾರೆ ಎಂದು ಅವರ ಕಚೇರಿ ಹೇಳಿತ್ತು.

ಇರಾನ್‌ ಮೇಲೆ ಇಸ್ರೇಲಿ ಮಿಲಿಟರಿ ನಡೆಸುತ್ತಿರುವ ದಾಳಿಗೆ ಅಮೆರಿಕ ಸೇರಿಕೊಳ್ಳಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆಗಳು ಬಂದಿವೆ. ವಾಷಿಂಗ್ಟನ್ ಇಸ್ರೇಲ್‌ನ ಮಿತ್ರ ರಾಷ್ಟ್ರವಾಗಿದ್ದು, ದೇಶದ ಭದ್ರತೆಯ ಖಾತರಿದಾರನಾಗಿ ಕಾರ್ಯನಿರ್ವಹಿಸುತ್ತದೆ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಂತೆ ನೋಡಿಕೊಳ್ಳುವುದು ಟ್ರಂಪ್ ಅವರ ಆದ್ಯತೆಯಾಗಿತ್ತು ಎಂದು ಶ್ವೇತಭವನ ತಿಳಿಸಿದೆ.

ಇಸ್ರೇಲ್ ದಾಳಿಗಳು ನಿಂತ ನಂತರವೇ ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧ: ಇರಾನ್

ಇಸ್ರೇಲ್ ಆಕ್ರಮಣಶೀಲತೆ ನಿಲ್ಲಿಸಿದ ನಂತರವೇ ಸಂಘರ್ಷವನ್ನು ಕೊನೆಗೊಳಿಸಲು ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧ ಎಂದು ಇರಾನ್ ಹೇಳಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ಯುರೋಪಿಯನ್ ವಿದೇಶಾಂಗ ಸಚಿವರೊಂದಿಗೆ ತಮ್ಮ ದೇಶದ ಪರಮಾಣು ಕಾರ್ಯಕ್ರಮದ ಕುರಿತು ಮಾತನಾಡಿದ ನಂತರ ಈ ಹೇಳಿಕೆ ನೀಡಿದ್ದಾರೆ.

“ಆಕ್ರಮಣಶೀಲತೆಯನ್ನು ನಿಲ್ಲಿಸಿದ ನಂತರ ಮತ್ತು ಆಕ್ರಮಣಕಾರನನ್ನು ಮಾಡಿದ ಅಪರಾಧಗಳಿಗೆ ಹೊಣೆಗಾರರನ್ನಾಗಿ ಮಾಡಿದ ನಂತರ ಇರಾನ್ ಮತ್ತೊಮ್ಮೆ ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧವಾಗಿದೆ” ಎಂದು ಅರಾಘ್ಚಿ ವರದಿಗಾರರಿಗೆ ತಿಳಿಸಿದ್ದಾರೆ.

“[ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಜರ್ಮನಿ ಮತ್ತು ಯುರೋಪಿಯನ್ ಒಕ್ಕೂಟ] ಜೊತೆ ಚರ್ಚೆಯ ಮುಂದುವರಿಕೆಯನ್ನು ನಾವು ಬೆಂಬಲಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ಮತ್ತೆ ಭೇಟಿಯಾಗಲು ನಮ್ಮ ಸಿದ್ಧತೆಯನ್ನು ವ್ಯಕ್ತಪಡಿಸುತ್ತೇವೆ.” ಎಂದು ಅವರು ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ಗುಂಡಿನ ಚಕಮಕಿ ಮುಂದುವರಿದಂತೆ ಈ ಬೆಳವಣಿಗೆಗಳು ಸಂಭವಿಸಿದವು.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. 9 ದಿನಗಳ ಇಸ್ರೇಲ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...