Homeಮುಖಪುಟಟರ್ಕಿ, ಸಿರಿಯಾ ಭೂಕಂಪದಲ್ಲಿ 4000ಕ್ಕೂ ಹೆಚ್ಚು ಜನರ ಸಾವು; ನೆರವಿಗೆ ನಿಂತ ಭಾರತ

ಟರ್ಕಿ, ಸಿರಿಯಾ ಭೂಕಂಪದಲ್ಲಿ 4000ಕ್ಕೂ ಹೆಚ್ಚು ಜನರ ಸಾವು; ನೆರವಿಗೆ ನಿಂತ ಭಾರತ

- Advertisement -
- Advertisement -

ಸೋಮವಾರ ಟರ್ಕಿ ಮತ್ತು ವಾಯುವ್ಯ ಸಿರಿಯಾದಲ್ಲಿ ಸಂಭವಿಸಿದ ಭಯಾನಕ ಭೂಕಂಪದಿಂದ 4000 ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಈ ಪ್ರದೇಶವು ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಒಂದಾಗಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

ಇದನ್ನೂ ಓದಿ: ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಇದೀಗ ಭಾರತೀಯ ವಾಯುಪಡೆಯ ವಿಮಾನದಲ್ಲಿ ಭಾರತ ಸರ್ಕಾರ, ಭೂಕಂಪ ಪರಿಹಾರ ಸಾಮಗ್ರಿಗಳ ಮೊದಲ ಬ್ಯಾಚ್‌ನ್ನು ಟರ್ಕಿಗೆ ಕಳುಹಿಸಿದೆ.

ಪುರುಷ ಮತ್ತು ಮಹಿಳಾ ಸಿಬ್ಬಂದಿ, ಹೆಚ್ಚು ನುರಿತ ಶ್ವಾನದಳಗಳು, ವೈದ್ಯಕೀಯ ಸಾಮಗ್ರಿಗಳು, ಸುಧಾರಿತ ಡ್ರಿಲ್ಲಿಂಗ್ ಉಪಕರಣಗಳು ಮತ್ತು ಸಹಾಯದ ಪ್ರಯತ್ನಗಳಿಗೆ ಅಗತ್ಯವಿರುವ ಇತರ ನಿರ್ಣಾಯಕ ಸಾಧನಗಳನ್ನು ಒಳಗೊಂಡಂತೆ ಪರಿಣಿತ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಶೋಧ ಪಡೆ ಮತ್ತು ಪಾರುಗಾಣಿಕಾ ತಂಡವನ್ನು ಕಳುಹಿಸಿಕೊಡಲಾಗಿದೆ.

“ಭಾರತದ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಸಾಮರ್ಥ್ಯಗಳು ಕಾರ್ಯನಿರ್ವಹಿಸುತ್ತಿವೆ. NDRF ಹುಡುಕಾಟ ಮತ್ತು ಪಾರುಗಾಣಿಕಾ ತಂಡಗಳು, ವಿಶೇಷವಾಗಿ ತರಬೇತಿ ಪಡೆದ ಶ್ವಾನದಳಗಳು, ವೈದ್ಯಕೀಯ ಸರಬರಾಜುಗಳು, ಕೊರೆಯುವ ಯಂತ್ರಗಳು ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ಭೂಕಂಪ ಪರಿಹಾರ ಸಾಮಗ್ರಿಗಳ 1 ನೇ ಬ್ಯಾಚ್ ತುರ್ಕಿಯೆಗೆ ಹೊರಡುತ್ತದೆ,” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ, ”ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭೂಕಂಪದ ನಂತರದ ಪರಿಣಾಮಗಳನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಟರ್ಕಿಯ ರಾಯಭಾರಿ ಫಿರತ್ ಸುನೆಲ್ ಅವರು, ಭಾರತ ಸರ್ಕಾರದ ನೆರವು ನೀಡುತ್ತೇನೆ ಎಂದು ಹೇಳಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ” ಭಾರತ ನಮಗೆ ಅಗತ್ಯವಿರುವ ಸ್ನೇಹಿತ ನಿಜವಾದ ಸ್ನೇಹಿತ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...