Homeಮುಖಪುಟಟರ್ಕಿ, ಸಿರಿಯಾ ಭೂಕಂಪದಲ್ಲಿ 4000ಕ್ಕೂ ಹೆಚ್ಚು ಜನರ ಸಾವು; ನೆರವಿಗೆ ನಿಂತ ಭಾರತ

ಟರ್ಕಿ, ಸಿರಿಯಾ ಭೂಕಂಪದಲ್ಲಿ 4000ಕ್ಕೂ ಹೆಚ್ಚು ಜನರ ಸಾವು; ನೆರವಿಗೆ ನಿಂತ ಭಾರತ

- Advertisement -
- Advertisement -

ಸೋಮವಾರ ಟರ್ಕಿ ಮತ್ತು ವಾಯುವ್ಯ ಸಿರಿಯಾದಲ್ಲಿ ಸಂಭವಿಸಿದ ಭಯಾನಕ ಭೂಕಂಪದಿಂದ 4000 ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಈ ಪ್ರದೇಶವು ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಒಂದಾಗಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

ಇದನ್ನೂ ಓದಿ: ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಇದೀಗ ಭಾರತೀಯ ವಾಯುಪಡೆಯ ವಿಮಾನದಲ್ಲಿ ಭಾರತ ಸರ್ಕಾರ, ಭೂಕಂಪ ಪರಿಹಾರ ಸಾಮಗ್ರಿಗಳ ಮೊದಲ ಬ್ಯಾಚ್‌ನ್ನು ಟರ್ಕಿಗೆ ಕಳುಹಿಸಿದೆ.

ಪುರುಷ ಮತ್ತು ಮಹಿಳಾ ಸಿಬ್ಬಂದಿ, ಹೆಚ್ಚು ನುರಿತ ಶ್ವಾನದಳಗಳು, ವೈದ್ಯಕೀಯ ಸಾಮಗ್ರಿಗಳು, ಸುಧಾರಿತ ಡ್ರಿಲ್ಲಿಂಗ್ ಉಪಕರಣಗಳು ಮತ್ತು ಸಹಾಯದ ಪ್ರಯತ್ನಗಳಿಗೆ ಅಗತ್ಯವಿರುವ ಇತರ ನಿರ್ಣಾಯಕ ಸಾಧನಗಳನ್ನು ಒಳಗೊಂಡಂತೆ ಪರಿಣಿತ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಶೋಧ ಪಡೆ ಮತ್ತು ಪಾರುಗಾಣಿಕಾ ತಂಡವನ್ನು ಕಳುಹಿಸಿಕೊಡಲಾಗಿದೆ.

“ಭಾರತದ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಸಾಮರ್ಥ್ಯಗಳು ಕಾರ್ಯನಿರ್ವಹಿಸುತ್ತಿವೆ. NDRF ಹುಡುಕಾಟ ಮತ್ತು ಪಾರುಗಾಣಿಕಾ ತಂಡಗಳು, ವಿಶೇಷವಾಗಿ ತರಬೇತಿ ಪಡೆದ ಶ್ವಾನದಳಗಳು, ವೈದ್ಯಕೀಯ ಸರಬರಾಜುಗಳು, ಕೊರೆಯುವ ಯಂತ್ರಗಳು ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ಭೂಕಂಪ ಪರಿಹಾರ ಸಾಮಗ್ರಿಗಳ 1 ನೇ ಬ್ಯಾಚ್ ತುರ್ಕಿಯೆಗೆ ಹೊರಡುತ್ತದೆ,” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ, ”ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭೂಕಂಪದ ನಂತರದ ಪರಿಣಾಮಗಳನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಟರ್ಕಿಯ ರಾಯಭಾರಿ ಫಿರತ್ ಸುನೆಲ್ ಅವರು, ಭಾರತ ಸರ್ಕಾರದ ನೆರವು ನೀಡುತ್ತೇನೆ ಎಂದು ಹೇಳಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ” ಭಾರತ ನಮಗೆ ಅಗತ್ಯವಿರುವ ಸ್ನೇಹಿತ ನಿಜವಾದ ಸ್ನೇಹಿತ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...