Homeಮುಖಪುಟಟರ್ಕಿ, ಸಿರಿಯಾ ಭೂಕಂಪದಲ್ಲಿ 4000ಕ್ಕೂ ಹೆಚ್ಚು ಜನರ ಸಾವು; ನೆರವಿಗೆ ನಿಂತ ಭಾರತ

ಟರ್ಕಿ, ಸಿರಿಯಾ ಭೂಕಂಪದಲ್ಲಿ 4000ಕ್ಕೂ ಹೆಚ್ಚು ಜನರ ಸಾವು; ನೆರವಿಗೆ ನಿಂತ ಭಾರತ

- Advertisement -
- Advertisement -

ಸೋಮವಾರ ಟರ್ಕಿ ಮತ್ತು ವಾಯುವ್ಯ ಸಿರಿಯಾದಲ್ಲಿ ಸಂಭವಿಸಿದ ಭಯಾನಕ ಭೂಕಂಪದಿಂದ 4000 ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಈ ಪ್ರದೇಶವು ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಒಂದಾಗಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

ಇದನ್ನೂ ಓದಿ: ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಇದೀಗ ಭಾರತೀಯ ವಾಯುಪಡೆಯ ವಿಮಾನದಲ್ಲಿ ಭಾರತ ಸರ್ಕಾರ, ಭೂಕಂಪ ಪರಿಹಾರ ಸಾಮಗ್ರಿಗಳ ಮೊದಲ ಬ್ಯಾಚ್‌ನ್ನು ಟರ್ಕಿಗೆ ಕಳುಹಿಸಿದೆ.

ಪುರುಷ ಮತ್ತು ಮಹಿಳಾ ಸಿಬ್ಬಂದಿ, ಹೆಚ್ಚು ನುರಿತ ಶ್ವಾನದಳಗಳು, ವೈದ್ಯಕೀಯ ಸಾಮಗ್ರಿಗಳು, ಸುಧಾರಿತ ಡ್ರಿಲ್ಲಿಂಗ್ ಉಪಕರಣಗಳು ಮತ್ತು ಸಹಾಯದ ಪ್ರಯತ್ನಗಳಿಗೆ ಅಗತ್ಯವಿರುವ ಇತರ ನಿರ್ಣಾಯಕ ಸಾಧನಗಳನ್ನು ಒಳಗೊಂಡಂತೆ ಪರಿಣಿತ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಶೋಧ ಪಡೆ ಮತ್ತು ಪಾರುಗಾಣಿಕಾ ತಂಡವನ್ನು ಕಳುಹಿಸಿಕೊಡಲಾಗಿದೆ.

“ಭಾರತದ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಸಾಮರ್ಥ್ಯಗಳು ಕಾರ್ಯನಿರ್ವಹಿಸುತ್ತಿವೆ. NDRF ಹುಡುಕಾಟ ಮತ್ತು ಪಾರುಗಾಣಿಕಾ ತಂಡಗಳು, ವಿಶೇಷವಾಗಿ ತರಬೇತಿ ಪಡೆದ ಶ್ವಾನದಳಗಳು, ವೈದ್ಯಕೀಯ ಸರಬರಾಜುಗಳು, ಕೊರೆಯುವ ಯಂತ್ರಗಳು ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ಭೂಕಂಪ ಪರಿಹಾರ ಸಾಮಗ್ರಿಗಳ 1 ನೇ ಬ್ಯಾಚ್ ತುರ್ಕಿಯೆಗೆ ಹೊರಡುತ್ತದೆ,” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ, ”ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭೂಕಂಪದ ನಂತರದ ಪರಿಣಾಮಗಳನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಟರ್ಕಿಯ ರಾಯಭಾರಿ ಫಿರತ್ ಸುನೆಲ್ ಅವರು, ಭಾರತ ಸರ್ಕಾರದ ನೆರವು ನೀಡುತ್ತೇನೆ ಎಂದು ಹೇಳಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ” ಭಾರತ ನಮಗೆ ಅಗತ್ಯವಿರುವ ಸ್ನೇಹಿತ ನಿಜವಾದ ಸ್ನೇಹಿತ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...