Homeಕರೋನಾ ತಲ್ಲಣಕೇರಳ: ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು

ಕೇರಳ: ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು

- Advertisement -
- Advertisement -

ಕೇರಳದಲ್ಲಿ ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉನ್ನತ ಅಧಿಕೃತ ಮೂಲಗಳು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಹೆಚ್ಚುತ್ತಿರುವ ಕೊರೊನಾ ಸೋಂಕುಗಳ ಆತಂಕದ ನಡುವೆ, ಒಕ್ಕೂಟ ಸರ್ಕಾರವು ಅಂತಹ ಎಲ್ಲಾ ಪ್ರಕರಣಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸುವಂತೆ ಕೇರಳಕ್ಕೆ ತಿಳಿಸಿದೆ. ಅಲ್ಲಿ ಸೋಂಕಿಗೊಳಗಾದ ವ್ಯಕ್ತಿಯಿಂದ ತೆಗೆದ ವೈರಸ್ ಮಾದರಿಯನ್ನು ಪರೀಕ್ಷಿಸಿ, ಇತರ ಪ್ರಕರಣಗಳೊಂದಿಗೆ ತಾಳೆ ಹಾಕಲಾಗುತ್ತದೆ.

ಕೊರೊನಾ ಲಸಿಕೆಗಳು ಮತ್ತು ರೋಗನಿರೋಧಕ ಶಕ್ತಿಯನ್ನು ದಾಟುವಷ್ಟು ಈ ವೈರಸ್ ರೂಪಾಂತರಗೊಂಡಿವೆ ಎಂದು ತಿಳಿದು ಬಂದರೆ ನಿಜವಾದ ಆತಂಕ ಆರಂಭವಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣಗಳು ಡೆಲ್ಟಾ ರೂಪಾಂತರಿಯಾಗಿವೆಯೇ ಎಂಬುದು ಇನ್ನು ತಿಳಿದಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ವರದಿಯಾಗಿರುವ ಹೆಚ್ಚಿನ ಕೊರೊನಾ ಪ್ರಕರಣಗಳು ಪತ್ತನಂತಿಟ್ಟ ಜಿಲ್ಲೆಯಿಂದ ವರದಿಯಾಗಿವೆ. ಪತ್ತನಂತಿಟ್ಟದಲ್ಲಿ ಮೊದಲ ಕೋವಿಡ್ ಲಸಿಕೆ ಪಡೆದಿರುವ 1,4974 ಜನರು ಸೋಂಕಿಗೆ ಒಳಗಾಗಿದ್ದರೆ, ಎರಡನೇ ಲಸಿಕೆ ಪಡೆದ 5,042 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಒಮ್ಮೆ ಕೊರೊನಾ ಬಂದು ಮತ್ತೊಮ್ಮೆ ಬರುವುದಿಲ್ಲ ಎಂಬಂತೆ ಇಲ್ಲ. ಕೇರಳದ ಕೆಲವು ಜಿಲ್ಲೆಗಳಲ್ಲಿಯೂ ಇಂತಹ ಪ್ರಕರಣಗಳಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಗಳು ತಿಳಿಸಿವೆ.

ಕಳೆದ ಕೆಲವು ವಾರಗಳಿಂದ ಕೇರಳದಲ್ಲಿ ಪ್ರತಿದಿನ 20,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದವೆ. ಮಂಗಳವಾರ ಮಾತ್ರ ಸ್ಪಲ್ಪ ಕಡಿಮೆ ಪ್ರಕರಣಗಳು ವರದಿಯಾಗಿವೆ. ಮಂಗಳವಾರ 13,049 ಪ್ರಕರಣಗಳು ಮತ್ತು 105 ಸಾವುಗಳು ವರದಿಯಾಗಿವೆ. ರಾಜ್ಯದಲ್ಲಿ ಬುಧವಾರ 21,119 ಪ್ರಕರಣಗಳು ಮತ್ತು 152 ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಕೇರಳದಲ್ಲಿ ಕೊರೊನಾ ಏರಿಕೆ: ವೀಕೆಂಡ್ ಲಾಕ್‌ಡೌನ್, ಕೇಂದ್ರದಿಂದ ತಂಡ ರವಾನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ...

0
"ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ...