Homeಮುಖಪುಟಹರಿಯಾಣ: ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರಿಂದ ಲೈಂಗಿಕ ಕಿರುಕುಳ; ಪ್ರಕರಣ ದಾಖಲು

ಹರಿಯಾಣ: ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರಿಂದ ಲೈಂಗಿಕ ಕಿರುಕುಳ; ಪ್ರಕರಣ ದಾಖಲು

- Advertisement -
- Advertisement -

ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರು ಲೈಂಗಿಕ ಕಿರುಕಳ ನೀಡುತ್ತಿದ್ದಾರೆ ಎಂದು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಲು ವಿಳಂಬ ಮಾಡಿದೆ ಎಂದು ಹರಿಯಾಣ ರಾಜ್ಯ ಮಹಿಳಾ ಆಯೋಗವು ಹೇಳಿದೆ.

ಸೆಪ್ಟೆಂಬರ್ 14ರಂದು ಶಾಲೆಯ ಕೆಲವು ವಿದ್ಯಾರ್ಥಿನಿಯರ ದೂರುಗಳನ್ನು ಪೊಲೀಸರಿಗೆ ರವಾನಿಸಿದ್ದೇವೆ ಆದರೆ ಅಕ್ಟೋಬರ್ 30ರಂದು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಯೋಗ ಹೇಳಿದೆ.

ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಂದ್ ಶಾಲೆಯ ಆಡಳಿತ ಮಂಡಳಿಯು ಪ್ರಾಂಶುಪಾಲರನ್ನು ಅಮಾನತು ಮಾಡಿದ ಕೆಲವು ದಿನಗಳ ನಂತರ ಹರಿಯಾಣ ಪೊಲೀಸರು ಸೋಮವಾರ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯನ್ನು ಬಂಧಿಸಲು ಜಿಂದ್ ಪೊಲೀಸರು ತಂಡಗಳನ್ನು ರಚಿಸಿದ್ದಾರೆ ಎಂದು ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪ್ರಾಂಶುಪಾಲರು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಂಚಕುಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ, ”ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿನಿಯರಿಂದ 60 ಲಿಖಿತ ದೂರುಗಳು ಬಂದಿವೆ. ಈ ಪೈಕಿ 50 ದೂರುಗಳು ದೈಹಿಕ ದೌರ್ಜನ್ಯ ನಡೆಸಿದ ಕುರಿತಾಗಿವೆ. ಇತರ ಹತ್ತು ಹುಡುಗಿಯರು, ತಮ್ಮ ದೂರಿನಲ್ಲಿ, ಪ್ರಿನ್ಸಿಪಾಲ್ ಅಂತಹ ವಿಷಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಮಗೆ ತಿಳಿದಿತ್ತು ಎಂದು ಹೇಳಿದ್ದಾರೆ. ಈ ಎಲ್ಲಾ ದೂರುಗಳನ್ನು ಅಪ್ರಾಪ್ತ ಬಾಲಕಿಯರು ನೀಡಿದ್ದಾರೆ ಎಂದು ಭಾಟಿಯಾ ಹೇಳಿದರು.

ಪ್ರಾಂಶುಪಾಲರು ತಮ್ಮನ್ನು ಅವರ ಕಚೇರಿಗೆ ಕರೆಸಿಕೊಂಡು ಅಶ್ಲೀಲ ಕೃತ್ಯಗಳಲ್ಲಿ ತೊಡಗಿದ್ದರು ಎಂದು ಸಂತ್ರಸ್ತರು ಆರೋಪಿಸಿದ್ದಾರೆ.

”ಸೆಪ್ಟೆಂಬರ್ 13 ರಂದು ಕೆಲವು ವಿದ್ಯಾರ್ಥಿನಿಯರು ದೂರು ನೀಡಿದರು ಮತ್ತು ಮರುದಿನ ಅದನ್ನು ಪೊಲೀಸರಿಗೆ ರವಾನಿಸಿದ್ದೇವೆ. ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 29ರವರೆಗೆ ಅವರ ಯಾವುದೇ ಕ್ರಮ ಜರುಗಿಸಿಲ್ಲ ಎಂದು Ms ಭಾಟಿಯಾ ಹೇಳಿದರು.

”ಪೊಲೀಸರು ಕ್ರಮ ಜರುಗಿಸದ ಕಾರಣ ವಿದ್ಯಾರ್ಥಿನಿಯರು ನಮ್ಮನ್ನು ಮತ್ತೆ ಸಂಪರ್ಕಿಸಿದರು. ನಾವು ಪೊಲೀಸ್ ಅಧೀಕ್ಷಕರೊಂದಿಗೆ ಮಾತನಾಡಿದ ಬಳಿಕ ಎಫ್ಐಆರ್ ದಾಖಲಿಸಲಾಗಿದೆ” ಎಂದು ಅವರು ಹೇಳಿದರು.

”ಎಫ್‌ಐಆರ್ ದಾಖಲಾದ ತಕ್ಷಣ ಆರೋಪಿಯನ್ನು ಬಂಧಿಸಲಿಲ್ಲ, ಇದು ಅವರಿಗೆ ತಲೆಮರೆಸಿಕೊಳ್ಳಲು ಸಮಯಾವಕಾಶ ನೀಡಿತು” ಎಂದು ಎಂಎಸ್ ಭಾಟಿಯಾ ಕೇಳಿದರು.

”ಪ್ರಾಂಶುಪಾಲರನ್ನು ಬೆಂಬಲಿಸಿದ ಮಹಿಳಾ ಶಿಕ್ಷಕಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ” ಎಂದು ಅವರು ಹೇಳಿದರು.

ಗುರುವಾರ ಸಂಜೆ ಕೆಲವು ವಿದ್ಯಾರ್ಥಿನಿಯರಿಗೆ ಅಪರಿಚಿತ ವ್ಯಕ್ತಿಗಳಿಂದ ದೂರವಾಣಿ ಕರೆಗಳು ಬಂದಿದ್ದು,ತಮ್ಮ ಮೇಲಿನ ದೂರು ವಾಪಸ್ ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ಅವರು ಹೇಳಿದರು.

ಆರೋಪಿಯನ್ನು ಕೂಡಲೇ ಬಂಧಿಸುವಂತೆ ಹರ್ಯಾಣ ಡಿಜಿಪಿ ಮತ್ತು ಜಿಂದ್ ಪೊಲೀಸ್ ವರಿಷ್ಠಾಧಿಕಾರಿಯನ್ನು ಆಯೋಗದ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಅಂತಹ ವ್ಯಕ್ತಿಗಳನ್ನು ತಕ್ಷಣವೇ ಕಂಬಿಗಳ ಹಿಂದೆ ಕಳುಹಿಸಬೇಕು ಎಂದು ಆಗ್ರಹಿಸಿದೆ.

ಪ್ರಾಂಶುಪಾಲರು ಕೆಲವು ಹುಡುಗಿಯರೊಂದಿಗೆ ಚಾಟ್ ಮಾಡಿರುವ ಬಗ್ಗೆ ಆಯೋಗದ ಬಳಿ ಪುರಾವೆಗಳಿವೆ ಎಂದು Ms ಭಾಟಿಯಾ ಹೇಳಿದರು.

ಜಿಂದ್ ಜಿಲ್ಲೆಯ ಪೊಲೀಸರು ಸೋಮವಾರ ಪ್ರಾಂಶುಪಾಲರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ), 341 (ತಪ್ಪು ಸಂಯಮ) ಮತ್ತು 342 (ತಪ್ಪಾದ ಬಂಧನ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಕ್ಟೋಬರ್ 27 ರಂದು ಹರಿಯಾಣ ಸರ್ಕಾರವು ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ ಎಂದು ಜಿಂದ್ ಜಿಲ್ಲಾಡಳಿತದ ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...