Homeಮುಖಪುಟಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

ಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

- Advertisement -
- Advertisement -

ಗಾಝಾ ಮೇಲೆ ದಾಳಿ ನಡೆಸಲು ಇಸ್ರೇಲ್‌ಗೆ ಜೋ ಬೈಡನ್‌ ಬೆಂಬಲ ಕೊಟ್ಟಿರುವುದು ಇದೀಗ ಅಮೆರಿಕದಲ್ಲಿ ಆಂತರಿಕ ಅಸಮಾಧಾನವನ್ನು ಹೆಚ್ಚಿಸಿದೆ. ಜೋ ಬೈಡನ್‌ ನಿಲುವನ್ನು ವಿರೋಧಿಸಿ 500ಕ್ಕೂ ಅಧಿಕ ಅಧಿಕಾರಿಗಳು ಸಹಿಯನ್ನು ಮಾಡಿ  ಪತ್ರವೊಂದನ್ನು ಕಳುಹಿಸಿದ್ದಾರೆ.

ಯುಎಸ್‌ನ ಸುಮಾರು 40 ಸರ್ಕಾರಿ ಕಚೇರಿಯ 500ಕ್ಕೂ ಅಧಿಕ ಸಿಬ್ಬಂದಿಗಳು ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್‌ಗೆ ಮತ್ತು ಕ್ಯಾಬಿನೆಟ್‌ಗೆ ಬರೆದ ಪತ್ರದಲ್ಲಿ ಗಾಝಾ ಪಟ್ಟಿಯ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದೆ ಮತ್ತು ಗಾಝಾ ಪಟ್ಟಿಗೆ ಮಾನವೀಯ ಸಹಾಯವನ್ನು ಅನುಮತಿಸುವಂತೆ ಸೂಚಿಸಲು ಆಗ್ರಹಿಸಿದೆ.

ಪತ್ರದಲ್ಲಿ ಅ.7ರಂದು 1,200 ಇಸ್ರೇಲ್‌ ನಾಗರಿಕರನ್ನು ಕೊಂದ ಹಮಾಸ್ ದಾಳಿಯನ್ನು ಕೂಡ ಖಂಡಿಸಲಾಗಿದೆ. ಗಾಝಾದ  ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಇದಕ್ಕೆ ಅಮೆರಿಕ ಬೆಂಬಲವನ್ನು ಸೂಚಿಸಿತ್ತು. ಯುದ್ಧಕ್ಕೆ ಬೇಕಾದ ಶಸ್ತ್ರಾಸ್ತ್ರಗಳನ್ನು ಕೂಡ ರವಾನಿಸಿತ್ತು. ಈಗ ಗಾಝಾದಲ್ಲಿ 11,200ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ.

ನಾವು ತುರ್ತು ಕದನ ವಿರಾಮಕ್ಕೆ ಒತ್ತಡ ಹೇರುವಂತೆ ಅಧ್ಯಕ್ಷ ಬಿಡೆನ್ ಅವರಲ್ಲಿ ಕೇಳುತ್ತಿದ್ದೇವೆ. ಇಸ್ರೇಲ್‌ನ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆಗೆ ಕರೆ ನೀಡಬೇಕು. ನೀರು, ಇಂಧನ, ವಿದ್ಯುತ್ ಮತ್ತು ಇತರ ಮೂಲಭೂತ ಸೇವೆಗಳ ಮರುಸ್ಥಾಪನೆ ಮಾಡಬೇಕು.  ಗಾಝಾ ಪಟ್ಟಿಗೆ  ಮಾನವೀಯ ನೆರವಿಗೆ ಅವಕಾಶ ಮಾಡುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ ಎಂದು ಪತ್ರವನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್  ವರದಿ ಮಾಡಿದೆ.

ಪತ್ರವು ಇಸ್ರೇಲ್‌ ಬಗೆಗಿನ ಬೈಡನ್‌ ನಿಲುವಿಗೆ ಹೆಚ್ಚುತ್ತಿರುವ ಆಂತರಿಕ ಅಸಮಾಧಾನವನ್ನು ಬಹಿರಂಗಪಡಿಸುತ್ತದೆ. ಈ ಮೊದಲು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ  3 ಆಂತರಿಕ ಮೆಮೊಗಳು ಕಳುಹಿಸಲಾಗಿತ್ತು ಮತ್ತು US ಏಜೆನ್ಸಿ ಫಾರ್ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್‌ನ 1,000ಕ್ಕೂ ಹೆಚ್ಚು ಉದ್ಯೋಗಿಗಳು ಸಹಿ ಮಾಡಿ ಮುಕ್ತ ಪತ್ರ ಬರೆದಿದ್ದರು.

ಪತ್ರಕ್ಕೆ ಸಹಿ ಮಾಡಿದವರು ತಮ್ಮ ಉದ್ಯೋಗ ಮತ್ತು ವೈಯಕ್ತಿಕ ಸುರಕ್ಷತೆಯ  ದೃಷ್ಟಿಯಿಂದ ತಮ್ಮ ಗುರತನ್ನು ಗೌಪ್ಯವಾಗಿಟ್ಟುಕೊಂಡಿದ್ದಾರೆ. ಸಹಿ ಮಾಡಿದವರಲ್ಲಿ ಹೆಚ್ಚಿನವರು ರಾಷ್ಟ್ರೀಯ ಭದ್ರತಾ ಮಂಡಳಿ ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡಿದವರಾಗಿದ್ದಾರೆ. ಅಗಾಧ ಪ್ರಮಾಣದ ಅಮೆರಿಕನ್ನರು ಕದನ ವಿರಾಮವನ್ನು ಬೆಂಬಲಿಸುತ್ತಾರೆ.  66 ಪ್ರತಿಶತ ಅಮೆರಿಕನ್ನರು ಕದನ ವಿರಾಮಕ್ಕಾಗಿ ಇಸ್ರೇಲ್ ಮೇಲೆ ಒತ್ತಡ ಹೇರಬೇಕು ಎಂದು ಬೈಡನ್‌ಗೆ ಆಗ್ರಹಿಸಿದ್ದಾರೆ.

ಬೈಡೆನ್ ಆಡಳಿತವು ಇತ್ತೀಚೆಗೆ ಗಾಝಾದಲ್ಲಿ ಹೆಚ್ಚಿನ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಲು ಪ್ರಾರಂಭಿಸಿದೆ, ಆದರೆ ಬೈಡೆನ್ ಮತ್ತು ಬ್ಲಿಂಕೆನ್ ಕದನ ವಿರಾಮವನ್ನು ಬೆಂಬಲಿಸಿಲ್ಲ. ನಿನ್ನೆಯಷ್ಟೇ ಬೈಡನ್‌ ತನ್ನ ಹೇಳಿಕೆಯಲ್ಲಿ ಗಾಝಾದ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದರು.

ಇದನ್ನು ಓದಿ: ಬೋವಿ ಸಮುದಾಯಕ್ಕೆ ಅವಮಾನ ಆರೋಪ: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...