Homeಮುಖಪುಟಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

ಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

- Advertisement -
- Advertisement -

ಗಾಝಾ ಮೇಲೆ ದಾಳಿ ನಡೆಸಲು ಇಸ್ರೇಲ್‌ಗೆ ಜೋ ಬೈಡನ್‌ ಬೆಂಬಲ ಕೊಟ್ಟಿರುವುದು ಇದೀಗ ಅಮೆರಿಕದಲ್ಲಿ ಆಂತರಿಕ ಅಸಮಾಧಾನವನ್ನು ಹೆಚ್ಚಿಸಿದೆ. ಜೋ ಬೈಡನ್‌ ನಿಲುವನ್ನು ವಿರೋಧಿಸಿ 500ಕ್ಕೂ ಅಧಿಕ ಅಧಿಕಾರಿಗಳು ಸಹಿಯನ್ನು ಮಾಡಿ  ಪತ್ರವೊಂದನ್ನು ಕಳುಹಿಸಿದ್ದಾರೆ.

ಯುಎಸ್‌ನ ಸುಮಾರು 40 ಸರ್ಕಾರಿ ಕಚೇರಿಯ 500ಕ್ಕೂ ಅಧಿಕ ಸಿಬ್ಬಂದಿಗಳು ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್‌ಗೆ ಮತ್ತು ಕ್ಯಾಬಿನೆಟ್‌ಗೆ ಬರೆದ ಪತ್ರದಲ್ಲಿ ಗಾಝಾ ಪಟ್ಟಿಯ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದೆ ಮತ್ತು ಗಾಝಾ ಪಟ್ಟಿಗೆ ಮಾನವೀಯ ಸಹಾಯವನ್ನು ಅನುಮತಿಸುವಂತೆ ಸೂಚಿಸಲು ಆಗ್ರಹಿಸಿದೆ.

ಪತ್ರದಲ್ಲಿ ಅ.7ರಂದು 1,200 ಇಸ್ರೇಲ್‌ ನಾಗರಿಕರನ್ನು ಕೊಂದ ಹಮಾಸ್ ದಾಳಿಯನ್ನು ಕೂಡ ಖಂಡಿಸಲಾಗಿದೆ. ಗಾಝಾದ  ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಇದಕ್ಕೆ ಅಮೆರಿಕ ಬೆಂಬಲವನ್ನು ಸೂಚಿಸಿತ್ತು. ಯುದ್ಧಕ್ಕೆ ಬೇಕಾದ ಶಸ್ತ್ರಾಸ್ತ್ರಗಳನ್ನು ಕೂಡ ರವಾನಿಸಿತ್ತು. ಈಗ ಗಾಝಾದಲ್ಲಿ 11,200ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ.

ನಾವು ತುರ್ತು ಕದನ ವಿರಾಮಕ್ಕೆ ಒತ್ತಡ ಹೇರುವಂತೆ ಅಧ್ಯಕ್ಷ ಬಿಡೆನ್ ಅವರಲ್ಲಿ ಕೇಳುತ್ತಿದ್ದೇವೆ. ಇಸ್ರೇಲ್‌ನ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆಗೆ ಕರೆ ನೀಡಬೇಕು. ನೀರು, ಇಂಧನ, ವಿದ್ಯುತ್ ಮತ್ತು ಇತರ ಮೂಲಭೂತ ಸೇವೆಗಳ ಮರುಸ್ಥಾಪನೆ ಮಾಡಬೇಕು.  ಗಾಝಾ ಪಟ್ಟಿಗೆ  ಮಾನವೀಯ ನೆರವಿಗೆ ಅವಕಾಶ ಮಾಡುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ ಎಂದು ಪತ್ರವನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್  ವರದಿ ಮಾಡಿದೆ.

ಪತ್ರವು ಇಸ್ರೇಲ್‌ ಬಗೆಗಿನ ಬೈಡನ್‌ ನಿಲುವಿಗೆ ಹೆಚ್ಚುತ್ತಿರುವ ಆಂತರಿಕ ಅಸಮಾಧಾನವನ್ನು ಬಹಿರಂಗಪಡಿಸುತ್ತದೆ. ಈ ಮೊದಲು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ  3 ಆಂತರಿಕ ಮೆಮೊಗಳು ಕಳುಹಿಸಲಾಗಿತ್ತು ಮತ್ತು US ಏಜೆನ್ಸಿ ಫಾರ್ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್‌ನ 1,000ಕ್ಕೂ ಹೆಚ್ಚು ಉದ್ಯೋಗಿಗಳು ಸಹಿ ಮಾಡಿ ಮುಕ್ತ ಪತ್ರ ಬರೆದಿದ್ದರು.

ಪತ್ರಕ್ಕೆ ಸಹಿ ಮಾಡಿದವರು ತಮ್ಮ ಉದ್ಯೋಗ ಮತ್ತು ವೈಯಕ್ತಿಕ ಸುರಕ್ಷತೆಯ  ದೃಷ್ಟಿಯಿಂದ ತಮ್ಮ ಗುರತನ್ನು ಗೌಪ್ಯವಾಗಿಟ್ಟುಕೊಂಡಿದ್ದಾರೆ. ಸಹಿ ಮಾಡಿದವರಲ್ಲಿ ಹೆಚ್ಚಿನವರು ರಾಷ್ಟ್ರೀಯ ಭದ್ರತಾ ಮಂಡಳಿ ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡಿದವರಾಗಿದ್ದಾರೆ. ಅಗಾಧ ಪ್ರಮಾಣದ ಅಮೆರಿಕನ್ನರು ಕದನ ವಿರಾಮವನ್ನು ಬೆಂಬಲಿಸುತ್ತಾರೆ.  66 ಪ್ರತಿಶತ ಅಮೆರಿಕನ್ನರು ಕದನ ವಿರಾಮಕ್ಕಾಗಿ ಇಸ್ರೇಲ್ ಮೇಲೆ ಒತ್ತಡ ಹೇರಬೇಕು ಎಂದು ಬೈಡನ್‌ಗೆ ಆಗ್ರಹಿಸಿದ್ದಾರೆ.

ಬೈಡೆನ್ ಆಡಳಿತವು ಇತ್ತೀಚೆಗೆ ಗಾಝಾದಲ್ಲಿ ಹೆಚ್ಚಿನ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಲು ಪ್ರಾರಂಭಿಸಿದೆ, ಆದರೆ ಬೈಡೆನ್ ಮತ್ತು ಬ್ಲಿಂಕೆನ್ ಕದನ ವಿರಾಮವನ್ನು ಬೆಂಬಲಿಸಿಲ್ಲ. ನಿನ್ನೆಯಷ್ಟೇ ಬೈಡನ್‌ ತನ್ನ ಹೇಳಿಕೆಯಲ್ಲಿ ಗಾಝಾದ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದರು.

ಇದನ್ನು ಓದಿ: ಬೋವಿ ಸಮುದಾಯಕ್ಕೆ ಅವಮಾನ ಆರೋಪ: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...