Homeಮುಖಪುಟಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

ಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

- Advertisement -
- Advertisement -

ಗಾಝಾ ಮೇಲೆ ದಾಳಿ ನಡೆಸಲು ಇಸ್ರೇಲ್‌ಗೆ ಜೋ ಬೈಡನ್‌ ಬೆಂಬಲ ಕೊಟ್ಟಿರುವುದು ಇದೀಗ ಅಮೆರಿಕದಲ್ಲಿ ಆಂತರಿಕ ಅಸಮಾಧಾನವನ್ನು ಹೆಚ್ಚಿಸಿದೆ. ಜೋ ಬೈಡನ್‌ ನಿಲುವನ್ನು ವಿರೋಧಿಸಿ 500ಕ್ಕೂ ಅಧಿಕ ಅಧಿಕಾರಿಗಳು ಸಹಿಯನ್ನು ಮಾಡಿ  ಪತ್ರವೊಂದನ್ನು ಕಳುಹಿಸಿದ್ದಾರೆ.

ಯುಎಸ್‌ನ ಸುಮಾರು 40 ಸರ್ಕಾರಿ ಕಚೇರಿಯ 500ಕ್ಕೂ ಅಧಿಕ ಸಿಬ್ಬಂದಿಗಳು ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್‌ಗೆ ಮತ್ತು ಕ್ಯಾಬಿನೆಟ್‌ಗೆ ಬರೆದ ಪತ್ರದಲ್ಲಿ ಗಾಝಾ ಪಟ್ಟಿಯ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದೆ ಮತ್ತು ಗಾಝಾ ಪಟ್ಟಿಗೆ ಮಾನವೀಯ ಸಹಾಯವನ್ನು ಅನುಮತಿಸುವಂತೆ ಸೂಚಿಸಲು ಆಗ್ರಹಿಸಿದೆ.

ಪತ್ರದಲ್ಲಿ ಅ.7ರಂದು 1,200 ಇಸ್ರೇಲ್‌ ನಾಗರಿಕರನ್ನು ಕೊಂದ ಹಮಾಸ್ ದಾಳಿಯನ್ನು ಕೂಡ ಖಂಡಿಸಲಾಗಿದೆ. ಗಾಝಾದ  ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಇದಕ್ಕೆ ಅಮೆರಿಕ ಬೆಂಬಲವನ್ನು ಸೂಚಿಸಿತ್ತು. ಯುದ್ಧಕ್ಕೆ ಬೇಕಾದ ಶಸ್ತ್ರಾಸ್ತ್ರಗಳನ್ನು ಕೂಡ ರವಾನಿಸಿತ್ತು. ಈಗ ಗಾಝಾದಲ್ಲಿ 11,200ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ.

ನಾವು ತುರ್ತು ಕದನ ವಿರಾಮಕ್ಕೆ ಒತ್ತಡ ಹೇರುವಂತೆ ಅಧ್ಯಕ್ಷ ಬಿಡೆನ್ ಅವರಲ್ಲಿ ಕೇಳುತ್ತಿದ್ದೇವೆ. ಇಸ್ರೇಲ್‌ನ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆಗೆ ಕರೆ ನೀಡಬೇಕು. ನೀರು, ಇಂಧನ, ವಿದ್ಯುತ್ ಮತ್ತು ಇತರ ಮೂಲಭೂತ ಸೇವೆಗಳ ಮರುಸ್ಥಾಪನೆ ಮಾಡಬೇಕು.  ಗಾಝಾ ಪಟ್ಟಿಗೆ  ಮಾನವೀಯ ನೆರವಿಗೆ ಅವಕಾಶ ಮಾಡುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ ಎಂದು ಪತ್ರವನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್  ವರದಿ ಮಾಡಿದೆ.

ಪತ್ರವು ಇಸ್ರೇಲ್‌ ಬಗೆಗಿನ ಬೈಡನ್‌ ನಿಲುವಿಗೆ ಹೆಚ್ಚುತ್ತಿರುವ ಆಂತರಿಕ ಅಸಮಾಧಾನವನ್ನು ಬಹಿರಂಗಪಡಿಸುತ್ತದೆ. ಈ ಮೊದಲು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ  3 ಆಂತರಿಕ ಮೆಮೊಗಳು ಕಳುಹಿಸಲಾಗಿತ್ತು ಮತ್ತು US ಏಜೆನ್ಸಿ ಫಾರ್ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್‌ನ 1,000ಕ್ಕೂ ಹೆಚ್ಚು ಉದ್ಯೋಗಿಗಳು ಸಹಿ ಮಾಡಿ ಮುಕ್ತ ಪತ್ರ ಬರೆದಿದ್ದರು.

ಪತ್ರಕ್ಕೆ ಸಹಿ ಮಾಡಿದವರು ತಮ್ಮ ಉದ್ಯೋಗ ಮತ್ತು ವೈಯಕ್ತಿಕ ಸುರಕ್ಷತೆಯ  ದೃಷ್ಟಿಯಿಂದ ತಮ್ಮ ಗುರತನ್ನು ಗೌಪ್ಯವಾಗಿಟ್ಟುಕೊಂಡಿದ್ದಾರೆ. ಸಹಿ ಮಾಡಿದವರಲ್ಲಿ ಹೆಚ್ಚಿನವರು ರಾಷ್ಟ್ರೀಯ ಭದ್ರತಾ ಮಂಡಳಿ ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡಿದವರಾಗಿದ್ದಾರೆ. ಅಗಾಧ ಪ್ರಮಾಣದ ಅಮೆರಿಕನ್ನರು ಕದನ ವಿರಾಮವನ್ನು ಬೆಂಬಲಿಸುತ್ತಾರೆ.  66 ಪ್ರತಿಶತ ಅಮೆರಿಕನ್ನರು ಕದನ ವಿರಾಮಕ್ಕಾಗಿ ಇಸ್ರೇಲ್ ಮೇಲೆ ಒತ್ತಡ ಹೇರಬೇಕು ಎಂದು ಬೈಡನ್‌ಗೆ ಆಗ್ರಹಿಸಿದ್ದಾರೆ.

ಬೈಡೆನ್ ಆಡಳಿತವು ಇತ್ತೀಚೆಗೆ ಗಾಝಾದಲ್ಲಿ ಹೆಚ್ಚಿನ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಲು ಪ್ರಾರಂಭಿಸಿದೆ, ಆದರೆ ಬೈಡೆನ್ ಮತ್ತು ಬ್ಲಿಂಕೆನ್ ಕದನ ವಿರಾಮವನ್ನು ಬೆಂಬಲಿಸಿಲ್ಲ. ನಿನ್ನೆಯಷ್ಟೇ ಬೈಡನ್‌ ತನ್ನ ಹೇಳಿಕೆಯಲ್ಲಿ ಗಾಝಾದ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದರು.

ಇದನ್ನು ಓದಿ: ಬೋವಿ ಸಮುದಾಯಕ್ಕೆ ಅವಮಾನ ಆರೋಪ: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....