Homeಮುಖಪುಟಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

ಇಸ್ರೇಲ್‌ಗೆ ಬೆಂಬಲ: ಬೈಡನ್‌ ನಿಲುವಿಗೆ ಅಮೆರಿಕದಲ್ಲಿ ಹೆಚ್ಚಿದ ಆಂತರಿಕ ಅಸಮಾಧಾನ

- Advertisement -
- Advertisement -

ಗಾಝಾ ಮೇಲೆ ದಾಳಿ ನಡೆಸಲು ಇಸ್ರೇಲ್‌ಗೆ ಜೋ ಬೈಡನ್‌ ಬೆಂಬಲ ಕೊಟ್ಟಿರುವುದು ಇದೀಗ ಅಮೆರಿಕದಲ್ಲಿ ಆಂತರಿಕ ಅಸಮಾಧಾನವನ್ನು ಹೆಚ್ಚಿಸಿದೆ. ಜೋ ಬೈಡನ್‌ ನಿಲುವನ್ನು ವಿರೋಧಿಸಿ 500ಕ್ಕೂ ಅಧಿಕ ಅಧಿಕಾರಿಗಳು ಸಹಿಯನ್ನು ಮಾಡಿ  ಪತ್ರವೊಂದನ್ನು ಕಳುಹಿಸಿದ್ದಾರೆ.

ಯುಎಸ್‌ನ ಸುಮಾರು 40 ಸರ್ಕಾರಿ ಕಚೇರಿಯ 500ಕ್ಕೂ ಅಧಿಕ ಸಿಬ್ಬಂದಿಗಳು ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್‌ಗೆ ಮತ್ತು ಕ್ಯಾಬಿನೆಟ್‌ಗೆ ಬರೆದ ಪತ್ರದಲ್ಲಿ ಗಾಝಾ ಪಟ್ಟಿಯ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದೆ ಮತ್ತು ಗಾಝಾ ಪಟ್ಟಿಗೆ ಮಾನವೀಯ ಸಹಾಯವನ್ನು ಅನುಮತಿಸುವಂತೆ ಸೂಚಿಸಲು ಆಗ್ರಹಿಸಿದೆ.

ಪತ್ರದಲ್ಲಿ ಅ.7ರಂದು 1,200 ಇಸ್ರೇಲ್‌ ನಾಗರಿಕರನ್ನು ಕೊಂದ ಹಮಾಸ್ ದಾಳಿಯನ್ನು ಕೂಡ ಖಂಡಿಸಲಾಗಿದೆ. ಗಾಝಾದ  ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿತ್ತು. ಇದಕ್ಕೆ ಅಮೆರಿಕ ಬೆಂಬಲವನ್ನು ಸೂಚಿಸಿತ್ತು. ಯುದ್ಧಕ್ಕೆ ಬೇಕಾದ ಶಸ್ತ್ರಾಸ್ತ್ರಗಳನ್ನು ಕೂಡ ರವಾನಿಸಿತ್ತು. ಈಗ ಗಾಝಾದಲ್ಲಿ 11,200ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ.

ನಾವು ತುರ್ತು ಕದನ ವಿರಾಮಕ್ಕೆ ಒತ್ತಡ ಹೇರುವಂತೆ ಅಧ್ಯಕ್ಷ ಬಿಡೆನ್ ಅವರಲ್ಲಿ ಕೇಳುತ್ತಿದ್ದೇವೆ. ಇಸ್ರೇಲ್‌ನ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆಗೆ ಕರೆ ನೀಡಬೇಕು. ನೀರು, ಇಂಧನ, ವಿದ್ಯುತ್ ಮತ್ತು ಇತರ ಮೂಲಭೂತ ಸೇವೆಗಳ ಮರುಸ್ಥಾಪನೆ ಮಾಡಬೇಕು.  ಗಾಝಾ ಪಟ್ಟಿಗೆ  ಮಾನವೀಯ ನೆರವಿಗೆ ಅವಕಾಶ ಮಾಡುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ ಎಂದು ಪತ್ರವನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್  ವರದಿ ಮಾಡಿದೆ.

ಪತ್ರವು ಇಸ್ರೇಲ್‌ ಬಗೆಗಿನ ಬೈಡನ್‌ ನಿಲುವಿಗೆ ಹೆಚ್ಚುತ್ತಿರುವ ಆಂತರಿಕ ಅಸಮಾಧಾನವನ್ನು ಬಹಿರಂಗಪಡಿಸುತ್ತದೆ. ಈ ಮೊದಲು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ  3 ಆಂತರಿಕ ಮೆಮೊಗಳು ಕಳುಹಿಸಲಾಗಿತ್ತು ಮತ್ತು US ಏಜೆನ್ಸಿ ಫಾರ್ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್‌ನ 1,000ಕ್ಕೂ ಹೆಚ್ಚು ಉದ್ಯೋಗಿಗಳು ಸಹಿ ಮಾಡಿ ಮುಕ್ತ ಪತ್ರ ಬರೆದಿದ್ದರು.

ಪತ್ರಕ್ಕೆ ಸಹಿ ಮಾಡಿದವರು ತಮ್ಮ ಉದ್ಯೋಗ ಮತ್ತು ವೈಯಕ್ತಿಕ ಸುರಕ್ಷತೆಯ  ದೃಷ್ಟಿಯಿಂದ ತಮ್ಮ ಗುರತನ್ನು ಗೌಪ್ಯವಾಗಿಟ್ಟುಕೊಂಡಿದ್ದಾರೆ. ಸಹಿ ಮಾಡಿದವರಲ್ಲಿ ಹೆಚ್ಚಿನವರು ರಾಷ್ಟ್ರೀಯ ಭದ್ರತಾ ಮಂಡಳಿ ಮತ್ತು ನ್ಯಾಯಾಂಗ ಇಲಾಖೆಯಲ್ಲಿ ಕೆಲಸ ಮಾಡಿದವರಾಗಿದ್ದಾರೆ. ಅಗಾಧ ಪ್ರಮಾಣದ ಅಮೆರಿಕನ್ನರು ಕದನ ವಿರಾಮವನ್ನು ಬೆಂಬಲಿಸುತ್ತಾರೆ.  66 ಪ್ರತಿಶತ ಅಮೆರಿಕನ್ನರು ಕದನ ವಿರಾಮಕ್ಕಾಗಿ ಇಸ್ರೇಲ್ ಮೇಲೆ ಒತ್ತಡ ಹೇರಬೇಕು ಎಂದು ಬೈಡನ್‌ಗೆ ಆಗ್ರಹಿಸಿದ್ದಾರೆ.

ಬೈಡೆನ್ ಆಡಳಿತವು ಇತ್ತೀಚೆಗೆ ಗಾಝಾದಲ್ಲಿ ಹೆಚ್ಚಿನ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಲು ಪ್ರಾರಂಭಿಸಿದೆ, ಆದರೆ ಬೈಡೆನ್ ಮತ್ತು ಬ್ಲಿಂಕೆನ್ ಕದನ ವಿರಾಮವನ್ನು ಬೆಂಬಲಿಸಿಲ್ಲ. ನಿನ್ನೆಯಷ್ಟೇ ಬೈಡನ್‌ ತನ್ನ ಹೇಳಿಕೆಯಲ್ಲಿ ಗಾಝಾದ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದರು.

ಇದನ್ನು ಓದಿ: ಬೋವಿ ಸಮುದಾಯಕ್ಕೆ ಅವಮಾನ ಆರೋಪ: ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...