Homeಮುಖಪುಟದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ - ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ದೆಹಲಿಯ ಸುತ್ತಮುತ್ತಲಿನ ಮೂರು ಪ್ರಮುಖ ಪ್ರತಿಭಟನಾ ಸ್ಥಳಗಳಲ್ಲಿ (ಸಿಂಘು, ಟಿಕ್ರಿ ಮತ್ತು ಗಾಜಿಪುರ) ಇಂಟರ್ನೆಟ್ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆಯ ಭರವಸೆ ನೀಡುವಂತೆ ಒತ್ತಾಯಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆಯ ನಂತರ ರಾಕೇಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ್ದರು. ಇದು ಉತ್ತರ ಭಾರತದ ರಾಜ್ಯಗಳ ರೈತರನ್ನು ಕೆರಳಿಸಿತ್ತು. ಇದರಿಂದ ಪ್ರಚೋದಿತಗೊಂಡ ಲಕ್ಷಾಂತರ ರೈತ ಬೆಂಬಲಿಗರು ಪ್ರತಿ ಹಳ್ಳಿಯಲ್ಲೂ ಮಹಾಪಂಚಾಯತ್ ನಡೆಸಿ ದೆಹಲಿಯಲ್ಲಿ ಕುಳಿತಿರುವ ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಇದರ ಬೆನ್ನಲ್ಲೇ ರೈತ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ರೈತ ಮುಖಂಡ ರಾಕೇಶ್ ಟಿಕಾಯತ್ ಇಂದು (ಫೆಬ್ರವರಿ 6) ರಾಷ್ಟ್ರದಾದ್ಯಂತ ರಸ್ತೆ ತಡೆ (ಚಕ್ಕಾ ಜಾಮ್) ಪ್ರತಿಭಟನೆಯನ್ನು ನಡೆಸಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಸುಮಾರು 50,000 ಕ್ಕೂ ಹೆಚ್ಚು ಪೊಲೀಸರು, ಅರೆ ಸೈನಿಕರು ಮತ್ತು ಮೀಸಲು ಪಡೆಯನ್ನು ದೆಹಲಿಯ ಗಡಿಗಳಲ್ಲಿ ನಿಯೋಜನೆ ಮಾಡಿದೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಮೂರು ವಿವಾದಾತ್ಮಕ ಕೇಂದ್ರ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಸಮ್ಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಚಕ್ಕಾ ಜಾಮ್ ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾಗಲಿದ್ದು, ದೇಶದ ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು 3 ಗಂಟೆಯವರೆಗೆ ನಿರ್ಬಂಧಿಸಲಾಗುವುದು.

“ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಾಳೆ ಯಾವುದೇ ರಸ್ತೆ ತಡೆ ಇಲ್ಲ; ದೆಹಲಿಯನ್ನು ಹೊರತುಪಡಿಸಿ ದೇಶದ ಉಳಿದ ಭಾಗಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಲಾಗುವುದು” ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೇವಲ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಮಾತ್ರ ತಡೆಯಲಾಗುತ್ತಿದ್ದು, ದೆಹಲಿಯಲ್ಲಿ ಯಾವುದೇ ಪ್ರತಿಭಟನೆ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸಿದ್ದರೂ, 50,000 ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ಎಲ್ಲ ತುರ್ತು ಹಾಗೂ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದ್ದು, ಈ ಪ್ರತಿಭಟನೆ ಸಂಪೂರ್ಣ ಅಹಿಂಸಾತ್ಮಕ ಹಾಗೂ ಶಾಂತಿಯುತವಾಗಿರುತ್ತವೆ ಎಂದು ರೈತ ಮುಖಂಡರು ಹೇಳಿದ್ದಾರೆ. ಆದರೆ ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸರು ಬಿಗಿಬಂದೋಬಸ್ತ್ ವ್ಯವಸ್ಥೆಗೊಳಿಸಿದ್ದಾರೆ.

ರಾಜಧಾನಿಯ ವಿವಿಧೆಡೆ ಬಾಂಬ್ ಹಾಗೂ ಶ್ವಾನದಳವನ್ನು ನಿಯೋಜಿಸಲಾಗಿದೆ. ಮಾರುಕಟ್ಟೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಹಾಗೂ ಐತಿಹಾಸಿಕ ಮಹತ್ವದ ಸ್ಥಳಗಳಾದ ಕೆಂಪು ಕೋಟೆ, ಇಂಡಿಯಾ ಗೇಟ್ ಮತ್ತು ಸಂಸತ್ ಭವನದ ರಸ್ತೆಗಳ ಮೇಲೆ ಹೆಚ್ಚಿನ ಕಣ್ಗಾವಲು ವ್ಯವಸ್ಥೆಗೊಳಿಸಲಾಗಿದೆ. ರಾಜಧಾನಿಯತ್ತ ಬರುವ ಕಚ್ಚಾ ರಸ್ತೆಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಸಾವಿರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಇದನ್ನು ಕೇಂದ್ರೀಯ ಸಿ4ಐ ನಿಯಂತ್ರಣ ಕೊಠಡಿಗಳಿಂದ ವೀಕ್ಷಿಸಲಾಗುತ್ತಿದೆ.

“ವದಂತಿ ಹರಡುವವರನ್ನು ಪತ್ತೆಹಚ್ಚಲು ಅಥವಾ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ನಾವು ಇತರ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ದೆಹಲಿ ಪೊಲೀಸ್ ವಕ್ತಾರ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ದೆಹಲಿಯ ಸುತ್ತಮುತ್ತಲಿನ ಮೂರು ಪ್ರಮುಖ ಪ್ರತಿಭಟನಾ ಸ್ಥಳಗಳಲ್ಲಿ (ಸಿಂಘು, ಟಿಕ್ರಿ ಮತ್ತು ಗಾಜಿಪುರ) ಇಂಟರ್ನೆಟ್ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗ, “ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಪ್ರತಿಭಟನಾನಿರತ ರೈತರು ಸಂಯಮ ಕಾಪಾಡುವಂತೆ ಮನವಿ ಮಾಡುತ್ತಿದ್ದೇವೆ. ಶಾಂತಿಯುತವಾಗಿ ಸೇರುವುದು ಹಾಗೂ ಅಭಿವ್ಯಕ್ತಿಯ ಹಕ್ಕನ್ನು ಆಫ್‌ಲೈನ್ ಮತ್ತು ಆನ್‌ಲೈನ್ ಮೂಲಕ ಸಂರಕ್ಷಿಸಬೇಕು. ಎಲ್ಲರ ಮಾನವ ಹಕ್ಕುಗಳನ್ನು ಗೌರವಿಸುವ ರೀತಿಯಲ್ಲಿ ಸಮಾನ ಪರಿಹಾರವನ್ನು ಕಂಡುಹಿಡಿಯುವುದು ಅಗತ್ಯ” ಎಂದು ಮನವಿ ಮಾಡಿದೆ.


ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...