Homeಮುಖಪುಟದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ - ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ದೆಹಲಿಯ ಸುತ್ತಮುತ್ತಲಿನ ಮೂರು ಪ್ರಮುಖ ಪ್ರತಿಭಟನಾ ಸ್ಥಳಗಳಲ್ಲಿ (ಸಿಂಘು, ಟಿಕ್ರಿ ಮತ್ತು ಗಾಜಿಪುರ) ಇಂಟರ್ನೆಟ್ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆಯ ಭರವಸೆ ನೀಡುವಂತೆ ಒತ್ತಾಯಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆಯ ನಂತರ ರಾಕೇಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ್ದರು. ಇದು ಉತ್ತರ ಭಾರತದ ರಾಜ್ಯಗಳ ರೈತರನ್ನು ಕೆರಳಿಸಿತ್ತು. ಇದರಿಂದ ಪ್ರಚೋದಿತಗೊಂಡ ಲಕ್ಷಾಂತರ ರೈತ ಬೆಂಬಲಿಗರು ಪ್ರತಿ ಹಳ್ಳಿಯಲ್ಲೂ ಮಹಾಪಂಚಾಯತ್ ನಡೆಸಿ ದೆಹಲಿಯಲ್ಲಿ ಕುಳಿತಿರುವ ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಇದರ ಬೆನ್ನಲ್ಲೇ ರೈತ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ರೈತ ಮುಖಂಡ ರಾಕೇಶ್ ಟಿಕಾಯತ್ ಇಂದು (ಫೆಬ್ರವರಿ 6) ರಾಷ್ಟ್ರದಾದ್ಯಂತ ರಸ್ತೆ ತಡೆ (ಚಕ್ಕಾ ಜಾಮ್) ಪ್ರತಿಭಟನೆಯನ್ನು ನಡೆಸಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಸುಮಾರು 50,000 ಕ್ಕೂ ಹೆಚ್ಚು ಪೊಲೀಸರು, ಅರೆ ಸೈನಿಕರು ಮತ್ತು ಮೀಸಲು ಪಡೆಯನ್ನು ದೆಹಲಿಯ ಗಡಿಗಳಲ್ಲಿ ನಿಯೋಜನೆ ಮಾಡಿದೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಮೂರು ವಿವಾದಾತ್ಮಕ ಕೇಂದ್ರ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಸಮ್ಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಚಕ್ಕಾ ಜಾಮ್ ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾಗಲಿದ್ದು, ದೇಶದ ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು 3 ಗಂಟೆಯವರೆಗೆ ನಿರ್ಬಂಧಿಸಲಾಗುವುದು.

“ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಾಳೆ ಯಾವುದೇ ರಸ್ತೆ ತಡೆ ಇಲ್ಲ; ದೆಹಲಿಯನ್ನು ಹೊರತುಪಡಿಸಿ ದೇಶದ ಉಳಿದ ಭಾಗಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಲಾಗುವುದು” ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೇವಲ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಮಾತ್ರ ತಡೆಯಲಾಗುತ್ತಿದ್ದು, ದೆಹಲಿಯಲ್ಲಿ ಯಾವುದೇ ಪ್ರತಿಭಟನೆ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸಿದ್ದರೂ, 50,000 ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ಎಲ್ಲ ತುರ್ತು ಹಾಗೂ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದ್ದು, ಈ ಪ್ರತಿಭಟನೆ ಸಂಪೂರ್ಣ ಅಹಿಂಸಾತ್ಮಕ ಹಾಗೂ ಶಾಂತಿಯುತವಾಗಿರುತ್ತವೆ ಎಂದು ರೈತ ಮುಖಂಡರು ಹೇಳಿದ್ದಾರೆ. ಆದರೆ ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸರು ಬಿಗಿಬಂದೋಬಸ್ತ್ ವ್ಯವಸ್ಥೆಗೊಳಿಸಿದ್ದಾರೆ.

ರಾಜಧಾನಿಯ ವಿವಿಧೆಡೆ ಬಾಂಬ್ ಹಾಗೂ ಶ್ವಾನದಳವನ್ನು ನಿಯೋಜಿಸಲಾಗಿದೆ. ಮಾರುಕಟ್ಟೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಹಾಗೂ ಐತಿಹಾಸಿಕ ಮಹತ್ವದ ಸ್ಥಳಗಳಾದ ಕೆಂಪು ಕೋಟೆ, ಇಂಡಿಯಾ ಗೇಟ್ ಮತ್ತು ಸಂಸತ್ ಭವನದ ರಸ್ತೆಗಳ ಮೇಲೆ ಹೆಚ್ಚಿನ ಕಣ್ಗಾವಲು ವ್ಯವಸ್ಥೆಗೊಳಿಸಲಾಗಿದೆ. ರಾಜಧಾನಿಯತ್ತ ಬರುವ ಕಚ್ಚಾ ರಸ್ತೆಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಸಾವಿರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಇದನ್ನು ಕೇಂದ್ರೀಯ ಸಿ4ಐ ನಿಯಂತ್ರಣ ಕೊಠಡಿಗಳಿಂದ ವೀಕ್ಷಿಸಲಾಗುತ್ತಿದೆ.

“ವದಂತಿ ಹರಡುವವರನ್ನು ಪತ್ತೆಹಚ್ಚಲು ಅಥವಾ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ನಾವು ಇತರ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ದೆಹಲಿ ಪೊಲೀಸ್ ವಕ್ತಾರ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ದೆಹಲಿಯ ಸುತ್ತಮುತ್ತಲಿನ ಮೂರು ಪ್ರಮುಖ ಪ್ರತಿಭಟನಾ ಸ್ಥಳಗಳಲ್ಲಿ (ಸಿಂಘು, ಟಿಕ್ರಿ ಮತ್ತು ಗಾಜಿಪುರ) ಇಂಟರ್ನೆಟ್ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗ, “ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಪ್ರತಿಭಟನಾನಿರತ ರೈತರು ಸಂಯಮ ಕಾಪಾಡುವಂತೆ ಮನವಿ ಮಾಡುತ್ತಿದ್ದೇವೆ. ಶಾಂತಿಯುತವಾಗಿ ಸೇರುವುದು ಹಾಗೂ ಅಭಿವ್ಯಕ್ತಿಯ ಹಕ್ಕನ್ನು ಆಫ್‌ಲೈನ್ ಮತ್ತು ಆನ್‌ಲೈನ್ ಮೂಲಕ ಸಂರಕ್ಷಿಸಬೇಕು. ಎಲ್ಲರ ಮಾನವ ಹಕ್ಕುಗಳನ್ನು ಗೌರವಿಸುವ ರೀತಿಯಲ್ಲಿ ಸಮಾನ ಪರಿಹಾರವನ್ನು ಕಂಡುಹಿಡಿಯುವುದು ಅಗತ್ಯ” ಎಂದು ಮನವಿ ಮಾಡಿದೆ.


ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...