Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 52, 30, 126 ಹೆಸರುಗಳನ್ನು ಕೈ ಬಿಡಲಾಗಿದೆ. ಈ ಮತದಾರರ ಪೈಕಿ ಹಲವರು ಸಾವನ್ನಪ್ಪಿದ್ದಾರೆ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಇನ್ನೂ ಹಲವರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿತ್ತು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಯೋಗ, “ಪ್ರಾಥಮಿಕ ಪರಿಷ್ಕರಣೆ ಪ್ರಕ್ರಿಯೆ ವೇಳೆ 18.66 ಲಕ್ಷ ಮತದಾರರು ಮೃತಪಟ್ಟಿರುವುದು, 26.01 ಲಕ್ಷ ಮತದಾರರು ಶಾಶ್ವತವಾಗಿ ಕ್ಷೇತ್ರಗಳನ್ನು ಬದಲಾಯಿಸಿರುವುದು ಮತ್ತು 7.5 ಲಕ್ಷ ಮತದಾರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದೆ.

ಇದಲ್ಲದೆ, 11,484 ಮತದಾರರನ್ನು ಪತ್ತೆ ಹಚ್ಚಲಾಗದವರು ಎಂದು ಗುರುತಿಸಲಾಗಿದೆ. ಇದು ಬಿಹಾರದ ಒಟ್ಟು ಮತದಾರ ಪೈಕಿ ಶೇಕಡ 6.62ರಷ್ಟು ಎಂದು ಚುನಾವಣಾ ಆಯೋಗ ಹೇಳಿದೆ.

ಜೂನ್ 24ರ ಹೊತ್ತಿಗೆ ಬಿಹಾರದಲ್ಲಿ ಒಟ್ಟು 7.89 ಕೋಟಿ ನೋಂದಾಯಿತ ಮತದಾರರಿದ್ದರು. ಪ್ರಸ್ತುತ 7.16 ಕೋಟಿ (ಶೇ. 90.67) ಮತದಾರರು ಗಣತಿ ನಮೂನೆಗಳನ್ನು (ಇಎಫ್) ಸಲ್ಲಿಸಿದ್ದಾರೆ. ಈ ಪೈಕಿ 7.13 ಕೋಟಿ (ಶೇ. 90.37) ಮತದಾರರ ನಮೂನೆಗಳು ಡಿಜಿಟಲೀಕರಣಗೊಂಡಿವೆ ಎಂದು ಆಯೋಗ ಮಾಹಿತಿ ನೀಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗಾಗಿ ಸುಮಾರು 1 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು), 4 ಲಕ್ಷ ಸ್ವಯಂಸೇವಕರು ಮತ್ತು 12 ಪ್ರಮುಖ ರಾಜಕೀಯ ಪಕ್ಷಗಳಿಂದ ನಾಮನಿರ್ದೇಶನಗೊಂಡ 1.5 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳನ್ನು (ಬಿಎಲ್‌ಎಗಳು) ಬಳಸಿಕೊಳ್ಳಲಾಗಿದೆ. ಈ ತಂಡಗಳಿಗೆ ಗಣತಿ ನಮೂನೆಗಳು ಅಥವಾ ಇಎಫ್‌ಗಳನ್ನು ಸಲ್ಲಿಸದ ಅಥವಾ ಕ್ಷೇತ್ರ ಪರಿಶೀಲನೆಯ ಸಮಯದಲ್ಲಿ ಕಾಣೆಯಾದ ಮತದಾರರನ್ನು ತಲುಪುವ ಕಾರ್ಯವನ್ನು ವಹಿಸಲಾಗಿತ್ತು ಎಂದಿದೆ.

ಇಲ್ಲಿಯವರೆಗೆ, 7.68 ಕೋಟಿ (ಶೇ. 97.30) ಮತದಾರರು ಗಣತಿ ನಮೂನೆ ಸಲ್ಲಿಕೆ ಅಥವಾ ಆನ್-ಗ್ರೌಂಡ್ ಪರಿಶೀಲನೆಯ ಮೂಲಕ ಮತ ಚಲಾಯಿಸಿದ್ದಾರೆ. ಉಳಿದ ಸುಮಾರು 21.35 ಲಕ್ಷ (ಶೇ. 2.70) ಮತದಾರರನ್ನು ಇನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಲಾಗಿಲ್ಲ, ಅವರ ಇಎಫ್‌ಗಳು ಇನ್ನೂ ಬಾಕಿ ಉಳಿದಿವೆ ಎಂದು ಆಯೋಗ ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪಟ್ಟಿಯಿಂದ ಕೈ ಬಿಡಲಾದ 52.30 ಲಕ್ಷ ಮತದಾರರ ವಿವರಗಳನ್ನು ರಾಜ್ಯದ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಸೇರ್ಪಡೆ, ಅಳಿಸುವಿಕೆ ಅಥವಾ ತಿದ್ದುಪಡಿಗಳ ಕುರಿತು ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 1 ರಿಂದ ಸೆಪ್ಟೆಂಬರ್ 1 ರವರೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು ಎಂದಿದೆ.

ಬಿಹಾರ: ಗುರುತಿಗಾಗಿ ಆಧಾರ್, ವೋಟರ್ ಐಡಿ, ಪಡಿತರ ಚೀಟಿ ಮಾತ್ರ ಪರಿಗಣನೆ- ಚುನಾವಣಾ ಆಯೋಗ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...