Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 52, 30, 126 ಹೆಸರುಗಳನ್ನು ಕೈ ಬಿಡಲಾಗಿದೆ. ಈ ಮತದಾರರ ಪೈಕಿ ಹಲವರು ಸಾವನ್ನಪ್ಪಿದ್ದಾರೆ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಇನ್ನೂ ಹಲವರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿತ್ತು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಯೋಗ, “ಪ್ರಾಥಮಿಕ ಪರಿಷ್ಕರಣೆ ಪ್ರಕ್ರಿಯೆ ವೇಳೆ 18.66 ಲಕ್ಷ ಮತದಾರರು ಮೃತಪಟ್ಟಿರುವುದು, 26.01 ಲಕ್ಷ ಮತದಾರರು ಶಾಶ್ವತವಾಗಿ ಕ್ಷೇತ್ರಗಳನ್ನು ಬದಲಾಯಿಸಿರುವುದು ಮತ್ತು 7.5 ಲಕ್ಷ ಮತದಾರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದೆ.

ಇದಲ್ಲದೆ, 11,484 ಮತದಾರರನ್ನು ಪತ್ತೆ ಹಚ್ಚಲಾಗದವರು ಎಂದು ಗುರುತಿಸಲಾಗಿದೆ. ಇದು ಬಿಹಾರದ ಒಟ್ಟು ಮತದಾರ ಪೈಕಿ ಶೇಕಡ 6.62ರಷ್ಟು ಎಂದು ಚುನಾವಣಾ ಆಯೋಗ ಹೇಳಿದೆ.

ಜೂನ್ 24ರ ಹೊತ್ತಿಗೆ ಬಿಹಾರದಲ್ಲಿ ಒಟ್ಟು 7.89 ಕೋಟಿ ನೋಂದಾಯಿತ ಮತದಾರರಿದ್ದರು. ಪ್ರಸ್ತುತ 7.16 ಕೋಟಿ (ಶೇ. 90.67) ಮತದಾರರು ಗಣತಿ ನಮೂನೆಗಳನ್ನು (ಇಎಫ್) ಸಲ್ಲಿಸಿದ್ದಾರೆ. ಈ ಪೈಕಿ 7.13 ಕೋಟಿ (ಶೇ. 90.37) ಮತದಾರರ ನಮೂನೆಗಳು ಡಿಜಿಟಲೀಕರಣಗೊಂಡಿವೆ ಎಂದು ಆಯೋಗ ಮಾಹಿತಿ ನೀಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗಾಗಿ ಸುಮಾರು 1 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು), 4 ಲಕ್ಷ ಸ್ವಯಂಸೇವಕರು ಮತ್ತು 12 ಪ್ರಮುಖ ರಾಜಕೀಯ ಪಕ್ಷಗಳಿಂದ ನಾಮನಿರ್ದೇಶನಗೊಂಡ 1.5 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳನ್ನು (ಬಿಎಲ್‌ಎಗಳು) ಬಳಸಿಕೊಳ್ಳಲಾಗಿದೆ. ಈ ತಂಡಗಳಿಗೆ ಗಣತಿ ನಮೂನೆಗಳು ಅಥವಾ ಇಎಫ್‌ಗಳನ್ನು ಸಲ್ಲಿಸದ ಅಥವಾ ಕ್ಷೇತ್ರ ಪರಿಶೀಲನೆಯ ಸಮಯದಲ್ಲಿ ಕಾಣೆಯಾದ ಮತದಾರರನ್ನು ತಲುಪುವ ಕಾರ್ಯವನ್ನು ವಹಿಸಲಾಗಿತ್ತು ಎಂದಿದೆ.

ಇಲ್ಲಿಯವರೆಗೆ, 7.68 ಕೋಟಿ (ಶೇ. 97.30) ಮತದಾರರು ಗಣತಿ ನಮೂನೆ ಸಲ್ಲಿಕೆ ಅಥವಾ ಆನ್-ಗ್ರೌಂಡ್ ಪರಿಶೀಲನೆಯ ಮೂಲಕ ಮತ ಚಲಾಯಿಸಿದ್ದಾರೆ. ಉಳಿದ ಸುಮಾರು 21.35 ಲಕ್ಷ (ಶೇ. 2.70) ಮತದಾರರನ್ನು ಇನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಲಾಗಿಲ್ಲ, ಅವರ ಇಎಫ್‌ಗಳು ಇನ್ನೂ ಬಾಕಿ ಉಳಿದಿವೆ ಎಂದು ಆಯೋಗ ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪಟ್ಟಿಯಿಂದ ಕೈ ಬಿಡಲಾದ 52.30 ಲಕ್ಷ ಮತದಾರರ ವಿವರಗಳನ್ನು ರಾಜ್ಯದ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಸೇರ್ಪಡೆ, ಅಳಿಸುವಿಕೆ ಅಥವಾ ತಿದ್ದುಪಡಿಗಳ ಕುರಿತು ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 1 ರಿಂದ ಸೆಪ್ಟೆಂಬರ್ 1 ರವರೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು ಎಂದಿದೆ.

ಬಿಹಾರ: ಗುರುತಿಗಾಗಿ ಆಧಾರ್, ವೋಟರ್ ಐಡಿ, ಪಡಿತರ ಚೀಟಿ ಮಾತ್ರ ಪರಿಗಣನೆ- ಚುನಾವಣಾ ಆಯೋಗ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...