Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 52, 30, 126 ಹೆಸರುಗಳನ್ನು ಕೈ ಬಿಡಲಾಗಿದೆ. ಈ ಮತದಾರರ ಪೈಕಿ ಹಲವರು ಸಾವನ್ನಪ್ಪಿದ್ದಾರೆ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಇನ್ನೂ ಹಲವರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿತ್ತು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಯೋಗ, “ಪ್ರಾಥಮಿಕ ಪರಿಷ್ಕರಣೆ ಪ್ರಕ್ರಿಯೆ ವೇಳೆ 18.66 ಲಕ್ಷ ಮತದಾರರು ಮೃತಪಟ್ಟಿರುವುದು, 26.01 ಲಕ್ಷ ಮತದಾರರು ಶಾಶ್ವತವಾಗಿ ಕ್ಷೇತ್ರಗಳನ್ನು ಬದಲಾಯಿಸಿರುವುದು ಮತ್ತು 7.5 ಲಕ್ಷ ಮತದಾರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದೆ.

ಇದಲ್ಲದೆ, 11,484 ಮತದಾರರನ್ನು ಪತ್ತೆ ಹಚ್ಚಲಾಗದವರು ಎಂದು ಗುರುತಿಸಲಾಗಿದೆ. ಇದು ಬಿಹಾರದ ಒಟ್ಟು ಮತದಾರ ಪೈಕಿ ಶೇಕಡ 6.62ರಷ್ಟು ಎಂದು ಚುನಾವಣಾ ಆಯೋಗ ಹೇಳಿದೆ.

ಜೂನ್ 24ರ ಹೊತ್ತಿಗೆ ಬಿಹಾರದಲ್ಲಿ ಒಟ್ಟು 7.89 ಕೋಟಿ ನೋಂದಾಯಿತ ಮತದಾರರಿದ್ದರು. ಪ್ರಸ್ತುತ 7.16 ಕೋಟಿ (ಶೇ. 90.67) ಮತದಾರರು ಗಣತಿ ನಮೂನೆಗಳನ್ನು (ಇಎಫ್) ಸಲ್ಲಿಸಿದ್ದಾರೆ. ಈ ಪೈಕಿ 7.13 ಕೋಟಿ (ಶೇ. 90.37) ಮತದಾರರ ನಮೂನೆಗಳು ಡಿಜಿಟಲೀಕರಣಗೊಂಡಿವೆ ಎಂದು ಆಯೋಗ ಮಾಹಿತಿ ನೀಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗಾಗಿ ಸುಮಾರು 1 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು), 4 ಲಕ್ಷ ಸ್ವಯಂಸೇವಕರು ಮತ್ತು 12 ಪ್ರಮುಖ ರಾಜಕೀಯ ಪಕ್ಷಗಳಿಂದ ನಾಮನಿರ್ದೇಶನಗೊಂಡ 1.5 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳನ್ನು (ಬಿಎಲ್‌ಎಗಳು) ಬಳಸಿಕೊಳ್ಳಲಾಗಿದೆ. ಈ ತಂಡಗಳಿಗೆ ಗಣತಿ ನಮೂನೆಗಳು ಅಥವಾ ಇಎಫ್‌ಗಳನ್ನು ಸಲ್ಲಿಸದ ಅಥವಾ ಕ್ಷೇತ್ರ ಪರಿಶೀಲನೆಯ ಸಮಯದಲ್ಲಿ ಕಾಣೆಯಾದ ಮತದಾರರನ್ನು ತಲುಪುವ ಕಾರ್ಯವನ್ನು ವಹಿಸಲಾಗಿತ್ತು ಎಂದಿದೆ.

ಇಲ್ಲಿಯವರೆಗೆ, 7.68 ಕೋಟಿ (ಶೇ. 97.30) ಮತದಾರರು ಗಣತಿ ನಮೂನೆ ಸಲ್ಲಿಕೆ ಅಥವಾ ಆನ್-ಗ್ರೌಂಡ್ ಪರಿಶೀಲನೆಯ ಮೂಲಕ ಮತ ಚಲಾಯಿಸಿದ್ದಾರೆ. ಉಳಿದ ಸುಮಾರು 21.35 ಲಕ್ಷ (ಶೇ. 2.70) ಮತದಾರರನ್ನು ಇನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಲಾಗಿಲ್ಲ, ಅವರ ಇಎಫ್‌ಗಳು ಇನ್ನೂ ಬಾಕಿ ಉಳಿದಿವೆ ಎಂದು ಆಯೋಗ ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪಟ್ಟಿಯಿಂದ ಕೈ ಬಿಡಲಾದ 52.30 ಲಕ್ಷ ಮತದಾರರ ವಿವರಗಳನ್ನು ರಾಜ್ಯದ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಸೇರ್ಪಡೆ, ಅಳಿಸುವಿಕೆ ಅಥವಾ ತಿದ್ದುಪಡಿಗಳ ಕುರಿತು ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 1 ರಿಂದ ಸೆಪ್ಟೆಂಬರ್ 1 ರವರೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು ಎಂದಿದೆ.

ಬಿಹಾರ: ಗುರುತಿಗಾಗಿ ಆಧಾರ್, ವೋಟರ್ ಐಡಿ, ಪಡಿತರ ಚೀಟಿ ಮಾತ್ರ ಪರಿಗಣನೆ- ಚುನಾವಣಾ ಆಯೋಗ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...