Homeಮುಖಪುಟ700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್...

700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಯನ್ನು ದೆಹಲಿ ಗಡಿಗಳಲ್ಲಿ ರೈತ ಹೋರಾಟ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ (SKM) ಸ್ವಾಗತಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ’ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮೋದಿ ಸರ್ಕಾರದ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಸ್ವಾಗತಿಸುತ್ತದೆ. ಸಂಸತ್ತಿನ ಕಾರ್ಯವಿಧಾನಗಳ ಮೂಲಕ ಕಾನೂನುಗಳನ್ನು ಹಿಂಪಡೆಯುವ ಘೋಷಣೆಗಾಗಿ ಕಾಯುತ್ತೇವೆ. ಇದು ನಡೆದರೆ ಭಾರತದಲ್ಲಿ ಒಂದು ವರ್ಷದ ರೈತರ ಹೋರಾಟಕ್ಕೆ ಐತಿಹಾಸಿಕ ಜಯ ಸಿಕ್ಕಂತಾಗುತ್ತದೆ’ ಎಂದು ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 2020 ರಲ್ಲಿ ಸುಗ್ರೀವಾಜ್ಞೆಗಳಾಗಿ ಜಾರಿಗೆ ತಂದಿದ್ದ ರೈತ ವಿರೋಧಿ, ಕಾರ್ಪೊರೇಟ್ ಪರವಾದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಭಾರತ ಸರ್ಕಾರದ ನಿರ್ಧಾರವನ್ನು ಗುರುನಾನಕ್ ಜಯಂತಿ ದಿನದಂದು ಘೋಷಿಸಿದ್ದಾರೆ. ‘ಈ ಹೋರಾಟದಲ್ಲಿ ಸುಮಾರು 700ಕ್ಕು ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಲಖೀಂಪುರ ಖೇರಿಯಲ್ಲಿ ನಡೆದ ಕೊಲೆಗಳು ಸೇರಿದಂತೆ ಈ ತಪ್ಪಿಸಬಹುದಾಗಿದ್ದ ಸಾವುಗಳಿಗೆ ಕೇಂದ್ರ ಸರ್ಕಾರದ ಹಠಮಾರಿತನವೇ ಕಾರಣ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ರೈತರ ಆಂದೋಲನವು 3 ಕರಾಳ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಕ್ಕಾಗಿ ಮಾತ್ರವಲ್ಲ, ಎಲ್ಲಾ ಕೃಷಿ ಉತ್ಪನ್ನಗಳಿಗೆ ಮತ್ತು ಎಲ್ಲಾ ರೈತರಿಗೆ ಲಾಭದಾಯಕ ಬೆಲೆಗಳ ಶಾಸನಬದ್ಧ ಖಾತರಿಗಾಗಿ ಎಂಬುದನ್ನು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಅವರಿಗೆ ನೆನಪಿಸುತ್ತದೆ. ಹಾಗೆಯೇ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ರೈತರ ಈ ಮಹತ್ವದ ಬೇಡಿಕೆ ಇನ್ನೂ ಬಾಕಿ ಇದೆ. ಇಂದಿನ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ, ಶೀಘ್ರದಲ್ಲೇ ತನ್ನ ಸಭೆಯನ್ನು ನಡೆಸಿ ಮುಂದಿನ ನಿರ್ಧಾರಗಳನ್ನು ಪ್ರಕಟಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ರದ್ದಾಗಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾನೂನಿಗೆ ಒತ್ತಾಯಿಸಿ ಸತತ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಮತ್ತು ದೇಶಾದ್ಯಂತ ನಡೆದ ಚಾರಿತ್ರಿಕ ರೈತ ಹೋರಾಟಕ್ಕೆ ಜಯ ಲಭಿಸಿದೆ. ದಿಟ್ಟ ರೈತ ಹೋರಾಟ ಎದುರು ಮಂಡಿಯೂರಿರುವ ನರೇಂದ್ರ ಮೋದಿ ಸರ್ಕಾರ ಕೊನೆಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹೋರಾಟವನ್ನು ಮುನ್ನೆಡಿಸಿದ ನೂರಾರು ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ‘ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ ಮುನ್ನುಗ್ಗುತ್ತಿದೆ’ ಎಂದು ಹೇಳಿದೆ.


ಇದನ್ನೂ ಓದಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...