Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...