Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...