Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...