Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...