Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...