Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...