Homeಮುಖಪುಟಸುಡಾನ್‌ನಲ್ಲಿ ಸಶಸ್ತ್ರ ಗುಂಪಿನಿಂದ 800ಕ್ಕೂ ಹೆಚ್ಚು ಜನರ ಹತ್ಯೆ

ಸುಡಾನ್‌ನಲ್ಲಿ ಸಶಸ್ತ್ರ ಗುಂಪಿನಿಂದ 800ಕ್ಕೂ ಹೆಚ್ಚು ಜನರ ಹತ್ಯೆ

- Advertisement -
- Advertisement -

ಸುಡಾನ್‌ನ ದಾರ್ಫುರ್ ಪ್ರಾಂತ್ಯದ ಅರ್ದಮಾಟಾದಲ್ಲಿ ಸಶಸ್ತ್ರ ದಂಗೆಯಿಂದಾಗಿ ಕಳೆದ 6 ತಿಂಗಳಲ್ಲಿ 800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 4.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂಬ ಅಚ್ಚರಿಯ ವರದಿಯನ್ನು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ (UNHCR) ಬಹಿರಂಗಪಡಿಸಿದೆ.

ಸುಡಾನ್ ಸೇನೆಯ ಮುಖ್ಯಸ್ಥ ಜನರಲ್‌ ಅಬ್ದೆಲ್ ಫತಾ ಬುರ್ಹಾನ್ ಮತ್ತು ಅರೆಸೇನಾ ಪಡೆಗಳ ಮುಖ್ಯಸ್ಥ ಜನರಲ್ ಮೊಹಮ್ಮದ್ ಹಮ್ದಾನ್ ಡಗಾಲೊ ನಡುವಿನ ಬಿಕ್ಕಟ್ಟಿನಿಂದಾಗಿ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಸೇನೆ ಮತ್ತು ಅರೆಸೇನಾ ನಡುವಿನ ಆಂತರಿಕ ಕಲಹದಲ್ಲಿ 800ಕ್ಕೂ ಹೆಚ್ಚು ಮಂದಿ ಹತ್ಯೆಯಾಗಿದ್ದು, ಇತ್ತೀಚೆಗೆ 8000ಕ್ಕೂ ಹೆಚ್ಚು ಮಂದಿ ನೆರೆಯ ದೇಶಕ್ಕೆ ವಲಸೆ ಹೋಗಿದ್ದಾರೆ.

ವಿಶ್ವಸಂಸ್ಥೆ ಹೊರಡಿಸಿದ ಹೇಳಿಕೆಯ ಪ್ರಕಾರ, ಸುಡಾನ್‌ನ ದಾರ್ಫುರ್ ಪ್ರದೇಶದಾದ್ಯಂತ ಹೆಚ್ಚುತ್ತಿರುವ ಹಿಂಸಾಚಾರವು 2 ದಶಕಗಳ ಹಿಂದೆ ನಡೆದ ದುಷ್ಕೃತ್ಯಗಳು ಮತ್ತೆ ಪುನರಾವರ್ತನೆಯಾಗಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ ಎಂದು ಹೇಳಿದೆ. 20 ವರ್ಷಗಳ ಹಿಂದೆ ದಾರ್ಫುರ್ ಪ್ರಾಂತ್ಯದಲ್ಲಿ ಉದ್ಭವಿಸಿದ್ದ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಶೋಷಣೆಗಳು ಇಡೀ ವಿಶ್ವವನ್ನೇ ಆಘಾತಗೊಳಿಸಿದ್ದವು ಎಂದು UN ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ ಹೇಳಿದ್ದಾರೆ.

ದಾರ್ಫುರ್ ಪ್ರಾಂತ್ಯದಲ್ಲಿ ಸುಮಾರು 100  ನಿರಾಶ್ರಿತರ ಶಿಬಿರಗಳನ್ನು ನೆಲಸಮಗೊಳಿಸಲಾಗಿದ್ದು, ಯುಎನ್‌ಎಚ್‌ಸಿಆರ್ ಪರಿಹಾರ ಸಾಮಾಗ್ರಿಗಳ ವ್ಯಾಪಕ ಲೂಟಿ ಕೂಡ ನಡೆದಿದೆ. 2 ದಶಕಗಳ ಹಿಂದೆ ಡಾರ್ಫೂರ್‌ನಾದ್ಯಂತ ಸಾವಿರಾರು ಜನರು ಕೊಲ್ಲಲ್ಪಟ್ಟರು ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದರು.

ಜನಾಂಗೀಯ ಹತ್ಯೆಯನ್ನು ತಡೆಗಟ್ಟುವಲ್ಲಿ UN ವಿಶೇಷ ಸಲಹೆಗಾರರಾದ ಆಲಿಸ್ ವೈರಿಮುನ್ಡೆರಿಟು ಅವರು ಜೂನ್‌ನಲ್ಲಿ ಈ ಬಗ್ಗೆ ಎಚ್ಚರಿಸಿದ್ದರು. ಜನಾಂಗೀಯತೆಯ ಆಧಾರದ ದಾಳಿಗಳು ಪಶ್ಚಿಮ ದಾರ್ಫುರ್‌ನಲ್ಲಿ ಮುಂದುವರಿಯುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಕಾರಣವಾಗಬಹುದು. ನಿರಂತರ ಲೈಂಗಿಕ ಹಿಂಸೆ, ಚಿತ್ರಹಿಂಸೆ, ಅನಿಯಂತ್ರಿತ ಹತ್ಯೆಗಳು, ನಾಗರಿಕರ ಸುಲಿಗೆ ಮತ್ತು ನಿರ್ದಿಷ್ಟ ಜನಾಂಗೀಯ ಗುಂಪುಗಳನ್ನು ಗುರಿಯಾಗಿಸಿರುವ ಬಗ್ಗೆ UN ನಿರಾಶ್ರಿತರ ಸಂಸ್ಥೆ ಎಚ್ಚರಿಕೆಯನ್ನು ನೀಡಿದೆ.

ಸೇನೆ ಮತ್ತು ಅರೆಸೈನಿಕ ಗುಂಪಿನ ನಡುವೆ ಏಪ್ರಿಲ್ ಮಧ್ಯದಲ್ಲಿ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಸುಡಾನ್‌ನಲ್ಲಿ 4.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. 1.2 ಮಿಲಿಯನ್ ಜನರು ನೆರೆಯ ದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಮೃತರ ಸಂಖ್ಯೆ 5ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...