Homeಮುಖಪುಟಸುಡಾನ್‌ನಲ್ಲಿ ಸಶಸ್ತ್ರ ಗುಂಪಿನಿಂದ 800ಕ್ಕೂ ಹೆಚ್ಚು ಜನರ ಹತ್ಯೆ

ಸುಡಾನ್‌ನಲ್ಲಿ ಸಶಸ್ತ್ರ ಗುಂಪಿನಿಂದ 800ಕ್ಕೂ ಹೆಚ್ಚು ಜನರ ಹತ್ಯೆ

- Advertisement -
- Advertisement -

ಸುಡಾನ್‌ನ ದಾರ್ಫುರ್ ಪ್ರಾಂತ್ಯದ ಅರ್ದಮಾಟಾದಲ್ಲಿ ಸಶಸ್ತ್ರ ದಂಗೆಯಿಂದಾಗಿ ಕಳೆದ 6 ತಿಂಗಳಲ್ಲಿ 800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 4.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂಬ ಅಚ್ಚರಿಯ ವರದಿಯನ್ನು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ (UNHCR) ಬಹಿರಂಗಪಡಿಸಿದೆ.

ಸುಡಾನ್ ಸೇನೆಯ ಮುಖ್ಯಸ್ಥ ಜನರಲ್‌ ಅಬ್ದೆಲ್ ಫತಾ ಬುರ್ಹಾನ್ ಮತ್ತು ಅರೆಸೇನಾ ಪಡೆಗಳ ಮುಖ್ಯಸ್ಥ ಜನರಲ್ ಮೊಹಮ್ಮದ್ ಹಮ್ದಾನ್ ಡಗಾಲೊ ನಡುವಿನ ಬಿಕ್ಕಟ್ಟಿನಿಂದಾಗಿ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಸೇನೆ ಮತ್ತು ಅರೆಸೇನಾ ನಡುವಿನ ಆಂತರಿಕ ಕಲಹದಲ್ಲಿ 800ಕ್ಕೂ ಹೆಚ್ಚು ಮಂದಿ ಹತ್ಯೆಯಾಗಿದ್ದು, ಇತ್ತೀಚೆಗೆ 8000ಕ್ಕೂ ಹೆಚ್ಚು ಮಂದಿ ನೆರೆಯ ದೇಶಕ್ಕೆ ವಲಸೆ ಹೋಗಿದ್ದಾರೆ.

ವಿಶ್ವಸಂಸ್ಥೆ ಹೊರಡಿಸಿದ ಹೇಳಿಕೆಯ ಪ್ರಕಾರ, ಸುಡಾನ್‌ನ ದಾರ್ಫುರ್ ಪ್ರದೇಶದಾದ್ಯಂತ ಹೆಚ್ಚುತ್ತಿರುವ ಹಿಂಸಾಚಾರವು 2 ದಶಕಗಳ ಹಿಂದೆ ನಡೆದ ದುಷ್ಕೃತ್ಯಗಳು ಮತ್ತೆ ಪುನರಾವರ್ತನೆಯಾಗಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ ಎಂದು ಹೇಳಿದೆ. 20 ವರ್ಷಗಳ ಹಿಂದೆ ದಾರ್ಫುರ್ ಪ್ರಾಂತ್ಯದಲ್ಲಿ ಉದ್ಭವಿಸಿದ್ದ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಶೋಷಣೆಗಳು ಇಡೀ ವಿಶ್ವವನ್ನೇ ಆಘಾತಗೊಳಿಸಿದ್ದವು ಎಂದು UN ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ ಹೇಳಿದ್ದಾರೆ.

ದಾರ್ಫುರ್ ಪ್ರಾಂತ್ಯದಲ್ಲಿ ಸುಮಾರು 100  ನಿರಾಶ್ರಿತರ ಶಿಬಿರಗಳನ್ನು ನೆಲಸಮಗೊಳಿಸಲಾಗಿದ್ದು, ಯುಎನ್‌ಎಚ್‌ಸಿಆರ್ ಪರಿಹಾರ ಸಾಮಾಗ್ರಿಗಳ ವ್ಯಾಪಕ ಲೂಟಿ ಕೂಡ ನಡೆದಿದೆ. 2 ದಶಕಗಳ ಹಿಂದೆ ಡಾರ್ಫೂರ್‌ನಾದ್ಯಂತ ಸಾವಿರಾರು ಜನರು ಕೊಲ್ಲಲ್ಪಟ್ಟರು ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದರು.

ಜನಾಂಗೀಯ ಹತ್ಯೆಯನ್ನು ತಡೆಗಟ್ಟುವಲ್ಲಿ UN ವಿಶೇಷ ಸಲಹೆಗಾರರಾದ ಆಲಿಸ್ ವೈರಿಮುನ್ಡೆರಿಟು ಅವರು ಜೂನ್‌ನಲ್ಲಿ ಈ ಬಗ್ಗೆ ಎಚ್ಚರಿಸಿದ್ದರು. ಜನಾಂಗೀಯತೆಯ ಆಧಾರದ ದಾಳಿಗಳು ಪಶ್ಚಿಮ ದಾರ್ಫುರ್‌ನಲ್ಲಿ ಮುಂದುವರಿಯುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಕಾರಣವಾಗಬಹುದು. ನಿರಂತರ ಲೈಂಗಿಕ ಹಿಂಸೆ, ಚಿತ್ರಹಿಂಸೆ, ಅನಿಯಂತ್ರಿತ ಹತ್ಯೆಗಳು, ನಾಗರಿಕರ ಸುಲಿಗೆ ಮತ್ತು ನಿರ್ದಿಷ್ಟ ಜನಾಂಗೀಯ ಗುಂಪುಗಳನ್ನು ಗುರಿಯಾಗಿಸಿರುವ ಬಗ್ಗೆ UN ನಿರಾಶ್ರಿತರ ಸಂಸ್ಥೆ ಎಚ್ಚರಿಕೆಯನ್ನು ನೀಡಿದೆ.

ಸೇನೆ ಮತ್ತು ಅರೆಸೈನಿಕ ಗುಂಪಿನ ನಡುವೆ ಏಪ್ರಿಲ್ ಮಧ್ಯದಲ್ಲಿ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಸುಡಾನ್‌ನಲ್ಲಿ 4.8 ಮಿಲಿಯನ್‌ಗಿಂತಲೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. 1.2 ಮಿಲಿಯನ್ ಜನರು ನೆರೆಯ ದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಮೃತರ ಸಂಖ್ಯೆ 5ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....