Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...