Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....