Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...