Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...