Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...