Homeಮುಖಪುಟಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು: 90 ವಿಪಕ್ಷಗಳ ಸಂಸದರ ಅಮಾನತು

ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು: 90 ವಿಪಕ್ಷಗಳ ಸಂಸದರ ಅಮಾನತು

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ 30 ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿತ್ತು. ಇದೀಗ ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಒಟ್ಟು 90 ಸಂದರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿದ್ದು, ಲೋಕಸಭೆಯ ಇತಿಹಾಸದಲ್ಲೇ ಅಚ್ಚರಿಯ ಬೆಳವಣಿಗೆ ಎಂದು ಹೇಳಲಾಗಿದೆ.

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇದಲ್ಲದೆ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿತ್ತು. ಇಂದು ಬೆಳಿಗ್ಗೆ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದ 30 ಸಂಸದರನ್ನು ಅಮಾನತು ಮಾಡಲಾಗಿತ್ತು. ರಾಜ್ಯ ಸಭೆಯಲ್ಲೂ ಪ್ರತಿಪಕ್ಷಗಳ ಸಂಸದರು ಅಮಿತ್‌ ಶಾ ಹೇಳಿಕೆಗೆ ಪಟ್ಟು ಹಿಡಿದಿದ್ದು ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ.

ರಾಜ್ಯಸಭೆಯಿಂದ ಕಾಂಗ್ರೆಸ್‌ನ ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿ 46 ಸಂಸದರನ್ನು ಅಮಾನತು ಮಾಡಲಾಗಿದೆ.

ಲೋಕಸಭೆಯಿಂದ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು  ಉಪನಾಯಕ ಗೌರವ್ ಗೊಗೊಯ್, ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ, ಸತಾಬ್ದಿ ರಾಯ್ ಮತ್ತು ಡಿಎಂಕೆ ಸಂಸದರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಸೇರಿದ್ದಾರೆ.

ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್ ರಂಜನ್ ಚೌಧರಿ, ಸರ್ಕಾರವು ಸರ್ವಾಧಿಕಾರದ ರೀತಿಯಲ್ಲಿ ವರ್ತಿಸುತ್ತಿದೆ ಮತ್ತು ಸಂಸತ್ತನ್ನು ಬಿಜೆಪಿ ಪ್ರಧಾನ ಕಚೇರಿಯಂತೆ ಪರಿಗಣಿಸುತ್ತಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿವೆ. ಆದರೆ ಸರಕಾರವು ಸರ್ವಾಧಿಕಾರದ ಉತ್ತುಂಗವನ್ನು ಮೀರಿದೆ. ಅವರಿಗೆ ಬಹುಮತವಿದೆ, ಅವರು ಅಧಿಕಾರವನ್ನು ಹಿಡಿದಿದ್ದಾರೆ. ಅವರು ಸಂಸತ್ತನ್ನು ಪಕ್ಷದ ಕಚೇರಿಯಂತೆ ನಡೆಸಲು ಬಯಸುತ್ತಾರೆ. ಆದರೆ ಅದು ಸಂಭವಿಸಬಾರದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೌರವ್ ಗೊಗೊಯ್, ಬಿಜೆಪಿ ಸರ್ಕಾರವು ಪ್ರತಿಪಕ್ಷಗಳನ್ನು ಕೆಡವಲು ಪ್ರಯತ್ನಿಸುತ್ತಿದೆ ಮತ್ತು ಗೃಹ ಸಚಿವರು ಭದ್ರತಾ ಲೋಪದ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಲೋಕಸಭೆಯ ಹೊರಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ 2 ಮಸೂದೆಗಳು ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...