Homeಮುಖಪುಟಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು: 90 ವಿಪಕ್ಷಗಳ ಸಂಸದರ ಅಮಾನತು

ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು: 90 ವಿಪಕ್ಷಗಳ ಸಂಸದರ ಅಮಾನತು

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ 30 ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿತ್ತು. ಇದೀಗ ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಒಟ್ಟು 90 ಸಂದರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿದ್ದು, ಲೋಕಸಭೆಯ ಇತಿಹಾಸದಲ್ಲೇ ಅಚ್ಚರಿಯ ಬೆಳವಣಿಗೆ ಎಂದು ಹೇಳಲಾಗಿದೆ.

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇದಲ್ಲದೆ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿತ್ತು. ಇಂದು ಬೆಳಿಗ್ಗೆ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದ 30 ಸಂಸದರನ್ನು ಅಮಾನತು ಮಾಡಲಾಗಿತ್ತು. ರಾಜ್ಯ ಸಭೆಯಲ್ಲೂ ಪ್ರತಿಪಕ್ಷಗಳ ಸಂಸದರು ಅಮಿತ್‌ ಶಾ ಹೇಳಿಕೆಗೆ ಪಟ್ಟು ಹಿಡಿದಿದ್ದು ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ.

ರಾಜ್ಯಸಭೆಯಿಂದ ಕಾಂಗ್ರೆಸ್‌ನ ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿ 46 ಸಂಸದರನ್ನು ಅಮಾನತು ಮಾಡಲಾಗಿದೆ.

ಲೋಕಸಭೆಯಿಂದ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು  ಉಪನಾಯಕ ಗೌರವ್ ಗೊಗೊಯ್, ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ, ಸತಾಬ್ದಿ ರಾಯ್ ಮತ್ತು ಡಿಎಂಕೆ ಸಂಸದರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಸೇರಿದ್ದಾರೆ.

ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್ ರಂಜನ್ ಚೌಧರಿ, ಸರ್ಕಾರವು ಸರ್ವಾಧಿಕಾರದ ರೀತಿಯಲ್ಲಿ ವರ್ತಿಸುತ್ತಿದೆ ಮತ್ತು ಸಂಸತ್ತನ್ನು ಬಿಜೆಪಿ ಪ್ರಧಾನ ಕಚೇರಿಯಂತೆ ಪರಿಗಣಿಸುತ್ತಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿವೆ. ಆದರೆ ಸರಕಾರವು ಸರ್ವಾಧಿಕಾರದ ಉತ್ತುಂಗವನ್ನು ಮೀರಿದೆ. ಅವರಿಗೆ ಬಹುಮತವಿದೆ, ಅವರು ಅಧಿಕಾರವನ್ನು ಹಿಡಿದಿದ್ದಾರೆ. ಅವರು ಸಂಸತ್ತನ್ನು ಪಕ್ಷದ ಕಚೇರಿಯಂತೆ ನಡೆಸಲು ಬಯಸುತ್ತಾರೆ. ಆದರೆ ಅದು ಸಂಭವಿಸಬಾರದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೌರವ್ ಗೊಗೊಯ್, ಬಿಜೆಪಿ ಸರ್ಕಾರವು ಪ್ರತಿಪಕ್ಷಗಳನ್ನು ಕೆಡವಲು ಪ್ರಯತ್ನಿಸುತ್ತಿದೆ ಮತ್ತು ಗೃಹ ಸಚಿವರು ಭದ್ರತಾ ಲೋಪದ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಲೋಕಸಭೆಯ ಹೊರಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ 2 ಮಸೂದೆಗಳು ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...