Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...