Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...