Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...