Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...