Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...